ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯುವಕನ ಶವ ಪತ್ತೆ ; ಕೊಲೆ ಶಂಕೆ 

01-07-26 09:34 pm       HK News Desk   ಕ್ರೈಂ

ಬೆಳ್ತಂಗಡಿ, ಜುಲೈ 1 ಕುವೆಟ್ಟು ಗ್ರಾಮದ ಶಕ್ತಿನಗರದ ಯೇನಪೋಯ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನ ಶವ ಕೊಲೆಯ ಶಂಕಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲನಿ ನಿವಾಸಿ ಶರೀಫ್ ಕೆ. ಎಂಬವರ ಪುತ್ರ ಮುಸ್ತಾಕ್ (27) ಮೃತಪಟ್ಟ ಯುವಕ.‌

ಬೆಳ್ತಂಗಡಿ, ಜುಲೈ 1 ಕುವೆಟ್ಟು ಗ್ರಾಮದ ಶಕ್ತಿನಗರದ ಯೇನಪೋಯ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನ ಶವ ಕೊಲೆಯ ಶಂಕಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲನಿ ನಿವಾಸಿ ಶರೀಫ್ ಕೆ. ಎಂಬವರ ಪುತ್ರ ಮುಸ್ತಾಕ್ (27) ಮೃತಪಟ್ಟ ಯುವಕ.‌

ಯುವಕ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದು, ಈತನ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಜೂನ್ 30ರಂದು ಮುಸ್ತಾಕ್ ರನ್ನು ಅವರ ಸಹೋದರ ಮನಾಸಿರ್ ತನ್ನ ಬೈಕ್‌ನಲ್ಲಿ ಕಲ್ಲೇರಿಯಿಂದ ಮದ್ದಡ್ಕದಲ್ಲಿ ಪಾರ್ಕ್ ಮಾಡಲಾಗಿದ್ದ ಲಾರಿಯ ಬಳಿ ಬಿಟ್ಟು ಹೋಗಿದ್ದರು. ಅದಾದ ಬಳಿಕ ಮುಸ್ತಾಕ್ ನಾಪತ್ತೆಯಾಗಿದ್ದರು. ಆದರೆ, ಜುಲೈ 1ರ ಬುಧವಾರ ಬೆಳಗ್ಗೆ ಗುರುವಾಯನಕೆರೆಯ ಕುವೆಟ್ಟು ಗ್ರಾಮದ ವಿದ್ಯುತ್ ಸಬ್ ಸ್ಟೇಷನ್‌ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಮುಸ್ತಾಕ್ ಶವವಾಗಿ ಪತ್ತೆಯಾಗಿದ್ದಾರೆ. 

ಘಟನೆಯ ಮಾಹಿತಿ ತಿಳಿದು ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಸ್ಪಷ್ಟವಾಗಲಿದೆ.