ಬ್ರೇಕಿಂಗ್ ನ್ಯೂಸ್
03-07-26 12:25 pm HK News Staffer ಕ್ರೈಂ
ಮಂಗಳೂರು, ಜುಲೈ 3: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆಯಲು ಯತ್ನಿಸಿದ ಖದೀಮನನ್ನು ಜೈಲಿನ ಭದ್ರತಾ ವಿಭಾಗದ ಕೆಎಸ್ಐಎಸ್ಎಫ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯಿಂದ ಗಾಂಜಾ, ಲೈಟರ್ ಹಾಗೂ ಗಾಂಜಾ ಸೇದುವ ಪೇಪರ್ಗಳನ್ನು ವಶಪಡಿಸಲಾಗಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಕೊಳತ್ತಮಜಲು ಕೋಳಕೇರಿ ಮೂಲದ, ಪ್ರಸ್ತುತ ಉರ್ವದಲ್ಲಿ ವಾಸವಿರುವ ತಿಲಕ್ರಾಜ್ ಬಂಧಿತ ಆರೋಪಿ. ಈ ಕೃತ್ಯದ ಹಿಂದೆ ಮೂಡುಶೆಡ್ಡೆ ನಿವಾಸಿ ಕಿರಣ್ ಹಾಗೂ ಸದ್ಯ ಕಾರಾಗೃಹದಲ್ಲಿ ಬಂಧಿಯಾಗಿರುವ ಕೈದಿ ಲಾಯ್ ವೇಗಸ್ ಕೈವಾಡ ಇರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ಬೆಳಕಿಗೆ ಬಂದಿದೆ.
ಜುಲೈ 2ರಂದು ಮುಂಜಾನೆ 4:20ರ ಸುಮಾರಿಗೆ ಆರೋಪಿ ತಿಲಕ್ರಾಜ್ ಜೈಲಿನ ಕಾಂಪೌಂಡ್ ಗೋಡೆಯ ಹೊರಗೆ ಸಂಶಯಾಸ್ಪದವಾಗಿ ಓಡಾಡುತ್ತಾ, ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಪೊಟ್ಟಣವೊಂದನ್ನು ಎಸೆದಿದ್ದ. ಈ ಘಟನೆಯನ್ನು ಅಲ್ಲಿ ಕಾವಲು ನಿಂತಿದ್ದ ಕೆಎಸ್ಐಎಸ್ಎಫ್ ಆರ್ಪಿಸಿ ಕಿರಣ್ ತಕ್ಷಣವೇ ಗಮನಿಸಿದ್ದಾರೆ. ಕೂಡಲೇ ಅವರು ಎಎಸ್ಐ ಕಿರಣ್ ಅಂಬಿಗ ಅವರಿಗೆ ಅಲರ್ಟ್ ಸಂದೇಶ ರವಾನಿಸಿದ್ದಾರೆ. ಜೈಲು ಸಿಬ್ಬಂದಿ ತನ್ನನ್ನು ಹಿಡಿಯಲು ಬರುತ್ತಿರುವುದನ್ನು ಕಂಡ ಆರೋಪಿ ತಿಲಕ್ರಾಜ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅಷ್ಟಕ್ಕೇ ಬಿಡದ ಸಿಬ್ಬಂದಿ ಸುಮಾರು 500 ಮೀಟರ್ನಷ್ಟು ದೂರ ಆತನನ್ನು ಬೆನ್ನಟ್ಟಿಕೊಂಡು ಹೋಗಿ ಬಂಧಿಸಿದ್ದಾರೆ.
ಬಳಿಕ ಕೆಎಸ್ಐಎಸ್ಎಫ್ ಸೂಚನೆಯಂತೆ ಬರ್ಕೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಜೈಲಿನೊಳಗೆ ಗಾಂಜಾ, ಡ್ರಗ್ಸ್ ತೂರುವ ಜಾಲ ಬಯಲಾಗಿದೆ. ಮೂಡುಶೆಡ್ಡೆ ನಿವಾಸಿ ಕಿರಣ್ ಎಂಬಾತ ತನಗೆ ಗಾಂಜಾ, ಲೈಟರ್ ಹಾಗೂ ರೋಲಿಂಗ್ ಪೇಪರ್ ನೀಡಿ, ಜೈಲಿನಲ್ಲಿರುವ ಲಾಯ್ ವೇಗಸ್ ಎಂಬಾತನ ಮೊಬೈಲ್ ನಂಬರ್ ಕೊಟ್ಟಿದ್ದ ಎಂದು ತಿಲಕ್ರಾಜ್ ಬಾಯಿಬಿಟ್ಟಿದ್ದಾನೆ. ಈ ಕೆಲಸಕ್ಕಾಗಿ ತನಗೆ ₹2,000 ಅಡ್ವಾನ್ಸ್ ನೀಡಲಾಗಿತ್ತು. ಜೈಲಿನೊಳಗಿದ್ದ ಕೈದಿ ಲಾಯ್ ವೇಗಸ್ ಫೋನ್ ಮಾಡಿ ಕರೆಕ್ಟಾಗಿ ಅಡುಗೆ ಮನೆ ಇರುವ ಜಾಗಕ್ಕೆ ಎಸೆಯುವಂತೆ ಹೇಳಿದ್ದ ಎಂದು ಆರೋಪಿ ತಿಳಿಸಿದ್ದಾನೆಂದು ವಿಚಾರಣೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸರು ಆರೋಪಿಗಳಾದ ತಿಲಕ್ರಾಜ್ ಮತ್ತು ಲಾಯ್ ವೇಗಸ್ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಹಾಗೂ ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ-2022ರ ಸೆಕ್ಷನ್ 42ರ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm