ಬ್ರೇಕಿಂಗ್ ನ್ಯೂಸ್
09-07-26 05:34 pm HK News Staffer ಕ್ರೈಂ
ಮಂಗಳೂರು, ಜುಲೈ 9: ಬೆಂಗಳೂರಿನ ಹೊಸಕೋಟೆಯಲ್ಲಿರುವ ಬಹುರಾಷ್ಟ್ರೀಯ ಉತ್ಪಾದನಾ ಸಂಸ್ಥೆಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಗಳೂರಿನ 28 ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರ ಯುವಕನಿಗೆ ವಂಚಕರು ಬರೋಬ್ಬರಿ ₹2.90 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೇವಲ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತನನ್ನು ಹಂತ ಹಂತವಾಗಿ ನಂಬಿಸಿ, ಬಲೆಯಲ್ಲಿ ಸಿಲುಕಿಸಿ ಹಣ ಪೀಕಿಸಿಕೊಂಡಿದ್ದಾರೆ. ಕಳೆದ ಮೇ 27ರಂದು 'ಪ್ರವೀಣ್' ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ತಾನು ಜಾಬ್ ಏಜೆನ್ಸಿಯ ಪ್ರತಿನಿಧಿ ಎಂದು ಹೇಳಿಕೊಂಡಿದ್ದು, ಇಂಟರ್ವ್ಯೂ ಫೀಸ್ ಎಂದು ₹2,000 ಪಾವತಿಸಲು ತಿಳಿಸಿದ್ದಾನೆ. ಆನಂತರ, ಮೇ 29 ಮತ್ತು ಜೂನ್ 1 ರಂದು ಕರೆ ಮಾಡಿ ನಂಬಿಕೆ ಹುಟ್ಟಿಸಿದ್ದು ಸಂತ್ರಸ್ತನಿಗೆ ವಿಡಿಯೋ ಇಂಟರ್ವ್ಯೂ ಲಿಂಕ್ ಕಳುಹಿಸಿ, ನೈಜ ಎನ್ನುವಂತೆ ಸಂದರ್ಶನ ನಡೆಸಿದ್ದಾರೆ. ಜೂನ್ 1 ರಂದು ನೀವು ಕೆಲಸಕ್ಕೆ ಆಯ್ಕೆಯಾಗಿದ್ದೀರಿ ಎಂದು ಹೇಳಿ ನಂಬಿಸಿದ್ದಾರೆ.
ಆಬಳಿಕ ಕೆಲಸ ಸಿಕ್ಕ ಖುಷಿಯಲ್ಲಿದ್ದ ಯುವಕನಿಂದ ಪ್ರೊಸೆಸಿಂಗ್ ಫೀಸ್ ಹೆಸರಲ್ಲಿ ₹20,000, ಗೇಟ್ ಪಾಸ್ ಶುಲ್ಕದ ಹೆಸರಲ್ಲಿ ₹27,600, ಮತ್ತು ವೈದ್ಯಕೀಯ ತಪಾಸಣೆ ಹೆಸರಿನಲ್ಲಿ ₹40,000 ದೋಚಿದ್ದಾರೆ. ಇದಾದ ಮೇಲೂ ಬೇರೆ ಬೇರೆ ಕಾರಣ ನೀಡಿ ಹಣ ಪೀಕಿಸುತ್ತಲೇ ಇದ್ದರು. ಇವರು ಪದೇ ಪದೇ ಹಣ ಕೇಳುತ್ತಿದ್ದರಿಂದ ಜೂನ್ 27ರಂದು ಅನುಮಾನಗೊಂಡ ಯುವಕ, ನಿಮ್ಮ ಒಟ್ಟು ಪ್ರಕ್ರಿಯೆಯನ್ನು ರದ್ದುಗೊಳಿಸಲು ಕೇಳಿಕೊಂಡಿದ್ದಾನೆ. ಅಷ್ಟರಲ್ಲಿ ವಂಚಕರು ಮತ್ತೊಂದು ಪ್ಲಾನ್ ಮಾಡಿದ್ದಾರೆ. ಕಟ್ಟಿರುವ ಎಲ್ಲಾ ಹಣ ರಿಫಂಡ್ ಆಗಬೇಕಾದರೆ ₹15,579 ಕ್ಯಾನ್ಸಲೇಶನ್ ಫೀಸ್ ಕಟ್ಟಬೇಕು ಎಂದು ಹೇಳಿ ಆ ಹಣವನ್ನೂ ಪಡೆದು ಸಂಪರ್ಕ ಕಡಿತಗೊಳಿಸಿದ್ದಾರೆ.
ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ಇಂಜಿನಿಯರ್ ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಹೆಲ್ಪ್ ಲೈನ್ಗೆ ದೂರು ನೀಡಿದ್ದಾರೆ. ಬಳಿಕ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm