ಬ್ರೇಕಿಂಗ್ ನ್ಯೂಸ್
10-07-26 10:14 pm HK News Staffer ಕ್ರೈಂ
ಲಕ್ನೋ, ಜು. 10: ಉತ್ತರ ಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಮಾಜಿ RTO ಅಧಿಕಾರಿ ಲಲಿತ್ ಕುಮಾರ್ ನಿವಾಸದಲ್ಲಿ ಬರೋಬ್ಬರಿ 13 ಕೆಜಿ ಚಿನ್ನ ಹಾಗೂ ₹1.62 ಕೋಟಿ ನಗದು ಪತ್ತೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಡೆದ ದಾಳಿಯಲ್ಲಿ ಅಧಿಕಾರಿಗಳು ಗೋಡೆಗಳೊಳಗೆ ನಿರ್ಮಿಸಲಾಗಿದ್ದ ರಹಸ್ಯ ಲಾಕರ್ಗಳನ್ನು ಪತ್ತೆಹಚ್ಚಿದ್ದು, ಪ್ರಕರಣ ಸಂಚಲನಕ್ಕೆ ಕಾರಣವಾಗಿದೆ.
ಅಕ್ರಮ ಆಸ್ತಿ ಗಳಿಕೆ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಾರಂಟ್ ಪಡೆದು ವಿಜಿಲೆನ್ಸ್ ಅಧಿಕಾರಿಗಳು ಲಲಿತ್ ಕುಮಾರ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಿದರು. ಮನೆಯ ಪ್ರತಿಯೊಂದು ಕೊಠಡಿ, ಫಾಲ್ಸ್ ಸೀಲಿಂಗ್, ಹಾಸಿಗೆ ಹಾಗೂ ಪೀಠೋಪಕರಣಗಳನ್ನು ಪರಿಶೀಲಿಸಿದ ವೇಳೆ ಗೋಡೆಗಳೊಳಗೆ ಅಡಗಿಸಲಾಗಿದ್ದ ರಹಸ್ಯ ಲಾಕರ್ಗಳು ಪತ್ತೆಯಾಗಿವೆ. ಈ ಲಾಕರ್ಗಳ ಬಗ್ಗೆ ಕುಟುಂಬ ಸದಸ್ಯರಿಗೂ ಮಾಹಿತಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಜಿಟಲ್ ಲಾಕರ್ ತೆರೆಯಲು ಎರಡು ಗಂಟೆ ನಾಟಕ;
ಶೋಧದ ವೇಳೆ ಹೈಟೆಕ್ ಡಿಜಿಟಲ್ ಲಾಕರ್ವೊಂದು ಪತ್ತೆಯಾಗಿದ್ದು, ಅದರ ಪಾಸ್ವರ್ಡ್ ಕೇಳಿದಾಗ "ಮರೆತುಹೋಗಿದೆ" ಎಂದು ಲಲಿತ್ ಕುಮಾರ್ ಹೇಳಿ ಸುಮಾರು ಎರಡು ಗಂಟೆಗಳ ಕಾಲ ಅಧಿಕಾರಿಗಳನ್ನು ವಿಳಂಬಗೊಳಿಸಲು ಯತ್ನಿಸಿದ್ದರೆಂದು ತಿಳಿದುಬಂದಿದೆ. ಬಳಿಕ ತಾಂತ್ರಿಕ ತಜ್ಞರ ನೆರವಿನಿಂದ ಲಾಕರ್ ತೆರೆಯಲಾಗಿದ್ದು, ಅದರೊಳಗೆ ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿವೆ.
ಇಷ್ಟೊಂದು ಪ್ರಮಾಣದ ಆಸ್ತಿ ಒಬ್ಬ ವ್ಯಕ್ತಿಯಿಂದ ಮಾತ್ರ ಸಂಗ್ರಹವಾಗಿರುವ ಸಾಧ್ಯತೆ ಕಡಿಮೆ ಎಂದು ವಿಜಿಲೆನ್ಸ್ ಶಂಕಿಸಿದ್ದು, ಇದರ ಹಿಂದೆ ದೊಡ್ಡ ಅಧಿಕಾರಿಗಳ ಜಾಲ ಅಥವಾ ಮಧ್ಯವರ್ತಿಗಳ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ. ಬ್ಯಾಂಕ್ ವ್ಯವಹಾರಗಳು, ಹೂಡಿಕೆ ದಾಖಲೆಗಳು ಹಾಗೂ ಆಸ್ತಿ ಮೂಲಗಳ ಪರಿಶೀಲನೆ ಮುಂದುವರಿದಿದೆ.
ತನಿಖೆ ಪೂರ್ಣಗೊಂಡ ಬಳಿಕ ಲಲಿತ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಸಾರಿಗೆ ಅಧಿಕಾರಿಯ ನಿವಾಸದಲ್ಲಿ ಪತ್ತೆಯಾದ ಈ ಭಾರಿ ಪ್ರಮಾಣದ ಅಕ್ರಮ ಸಂಪತ್ತು ಉತ್ತರ ಪ್ರದೇಶ ಮಾತ್ರವಲ್ಲದೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm