ಬ್ರೇಕಿಂಗ್ ನ್ಯೂಸ್
12-07-26 02:16 pm HK News Staffer ಕ್ರೈಂ
ಮಂಗಳೂರು, ಜುಲೈ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆಹಾಕಿದ್ದು ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕಡೆಗೂ ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಶಾದ್ (32) ಬೆಂಗಳೂರಿನಲ್ಲಿ ಸಿಕ್ಕಿಬಿದ್ದರೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ (41) ನನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.
ಕೃತ್ಯ ಎಸಗಿದ್ದ ಪ್ರಮುಖ ಆರೋಪಿಗಳಿಗೆ ಮೈಸೂರು ಮತ್ತು ಚಾಮರಾಜನಗರದಲ್ಲಿ ಹಾಗೂ ತಮಿಳುನಾಡಿನ ಈರೋಡ್ ನಲ್ಲಿ ಅಡಗಿಕೊಳ್ಳಲು ವ್ಯವಸ್ಥೆ ಮಾಡಿದ್ದ ಆರೋಪ ಇವರ ಮೇಲಿದ್ದು ಒಟ್ಟು 27 ಜನ ಆರೋಪಿಗಳ ಲಿಸ್ಟ್ ನಲ್ಲಿ ಇವರನ್ನೂ ಸೇರಿಸಲಾಗಿತ್ತು. ಪ್ರಕರಣದ ಬೆನ್ನತ್ತಿದ್ದ ಎನ್ಐಎ ಅಧಿಕಾರಿಗಳು ಒಬ್ಬೊಬ್ಬರನ್ನೇ ಬಲೆಗೆ ಕೆಡವಿದ್ದರು. ಕೊನೆಗೆ ಆರು ಮಂದಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರಿಂದ ಅವರ ಪತ್ತೆಗಾಗಿ ಮಾಹಿತಿ ಕೊಟ್ಟವರಿಗೆ ಬಹುಮಾನ ಘೋಷಿಸಿದ್ದರು. ಈ ಪೈಕಿ ಸೋನವಾರಪೇಟೆಯ ಹಾನಗಲ್ಲು ಸಿವಾಸಿ ಅಬ್ದುಲ್ ನಾಸಿರ್ (24) ವಿದೇಶಕ್ಕೆ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿತ್ತು. ಆದರೂ ತನಿಖೆ ನಡೆಸಿದ್ದ ಎನ್ಐಎ ಅಧಿಕಾರಿಗಳು 2025ರ ಎಪ್ರಿಲ್ ನಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳ ಬಗ್ಗೆಯೂ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್ಐ ಕಾರ್ಯಕರ್ತರು ಹಿಂದು ಮುಖಂಡರನ್ನು ಗುರಿಯಾಗಿಸಿದ ಟಾರ್ಗೆಟ್ ಹತ್ಯೆಯ ಭಾಗವಾಗಿ ಕೊಲೆ ನಡೆಸಿದ್ದರು ಎಂಬುದಾಗಿ ಎನ್ಐಎ ಜಾರ್ಜ್ ಶೀಟ್ ಸಲ್ಲಿಸಿತ್ತು. ತಲೆಮರೆಸಿಕೊಂಡಿದ್ದವರು ವೇಷ ಮರೆಸಿಕೊಂಡು ಬೆಂಗಳೂರು ಮತ್ತು ಕೇರಳದಲ್ಲಿ ಅಡಗಿದ್ದಾರೆಂಬ ಶಂಕೆಯಿತ್ತು. ಈ ಹಿನ್ನೆಲೆಯಲ್ಲಿ ಮಾಹಿತಿ ಕೊಟ್ಟವರಿಗೆ ತಲಾ ಎರಡು ಲಕ್ಷದ ಬಹುಮಾನದ ಆಫರ್ ನೀಡಲಾಗಿತ್ತು.
In a major breakthrough in the investigation into the murder of BJP Yuva Morcha leader Praveen Nettaru, the National Investigation Agency (NIA) has arrested two long-absconding accused, Naushad and Abdul Nasir, after an extensive manhunt.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm