ಬ್ರೇಕಿಂಗ್ ನ್ಯೂಸ್
16-07-26 02:02 pm HK News Staffer ಕ್ರೈಂ
ಮಂಗಳೂರು, ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಐನೂರು ಮುಖಬೆಲೆಯ ನೋಟುಗಳ ಬಂಡಲ್ ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ ಬಳಿಯ ಕಾಣಿಯೂರು ಗ್ರಾಮದ ಅಡಿಂಜೆ ಎಂಬಲ್ಲಿ ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ ಮಾರಾಟಕ್ಕೆ ರೆಡಿ ಮಾಡುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಪುತ್ತೂರು ನಿವಾಸಿ, ಇಬ್ರಾಹಿಂ, ಕೇರಳದ ಕಾಸರಗೋಡು ನಿವಾಸಿ ಶರೀಫ್, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಿವಾಸಿ ಸಂದೀಪ್, ಕಾಸರಗೋಡು ನಿವಾಸಿ ಮೊಹಮ್ಮದ್ ನವಾಸ್, ಪುತ್ತೂರು ನಿವಾಸಿ ಸಲ್ಮಾನ್, ಬೆಳ್ತಂಗಡಿ ನಿವಾಸಿ ಸಿರಾಜುದ್ದಿನ್ ಮತ್ತು ಇರ್ಷಾದ್ ಬಂಧಿತರು.
ಖಚಿತ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಎಸ್ಪಿ ಅರುಣ್ ನೇತೃತ್ವದ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ದು ನಾಲ್ಕು ಮನೆಗಳಿದ್ದ ಕಟ್ಟಡವನ್ನು ಬಾಡಿಗೆ ಪಡೆದು ನಕಲಿ ನೋಟು ತಯಾರಿಸುವ ಫ್ಯಾಕ್ಟರಿ ಮಾಡಿಕೊಂಡಿದ್ದರು. ಬೆಳ್ತಂಗಡಿಯ ಸಿರಾಜುದ್ದೀನ್ ಈ ನಕಲಿ ನೋಟು ಜಾಲದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ದಾಳಿಯ ವೇಳೆ 500 ಮುಖಬೆಲೆಯ ನಕಲಿ ನೋಟುಗಳ ಬಂಡಲ್ ಪತ್ತೆಯಾಗಿದೆ.


ಕಾಣಿಯೂರು ಬಳಿಯ ಅಡಿಂಜೆ ನಿವಾಸಿ ಇದ್ರಿಸ್ ಎಂಬವರಿಗೆ ಸೇರಿದ ನೂತನ ಕಟ್ಟಡದಲ್ಲಿ ಮೂರು ಮನೆಗಳನ್ನು ಬಾಡಿಗೆಗೆ ಪಡೆದಿದ್ದ ಸಿರಾಜುದ್ದೀನ್, ಅದರಲ್ಲಿ ಪ್ರಿಂಟರ್ ಇನ್ನಿತರ ಅತ್ಯಾಧುನಿಕ ಯಂತ್ರಗಳನ್ನು ಇಟ್ಟು ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದರು. ದಾಳಿ ಸಂದರ್ಭ ನೋಟು ಪ್ರಿಂಟ್ ಮಾಡಲು ಬಳಸುವ ಪೇಪರ್ ಬಂಡಲ್, ವಿವಿಧ ಮಾದರಿಯ ಸೀಲ್ ಗಳು, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ಇನ್ನಿತರ ವಸ್ತುಗಳು ಪತ್ತೆಯಾಗಿವೆ. RBI ಸೆಕ್ಯೂರಿಟಿ ಟ್ರೇಡ್ ಗಳನ್ನೂ ರೆಡಿ ಮಾಡಿಕೊಂಡು ಇರಿಸಿದ್ದರು.
ಯಾರಿಗೂ ಶಂಕೆ ಬರದ ರೀತಿಯಲ್ಲಿ ನಕಲಿ ನೋಟು ತಯಾರಿಸುವ ಕಾರ್ಖಾನೆಯನ್ನು ಮಾಡಿಕೊಂಡಿದ್ದರು. ನೋಟುಗಳನ್ನು ಪ್ರಿಂಟ್ ಮಾಡಿ ಬೇರೆ ಕಡೆಯಲ್ಲಿ ಸಪ್ಲೈ ಮಾಡಲು ಸ್ಕೆಚ್ ಹಾಕಿದ್ದರು. ಒಂದು ತಿಂಗಳಿನಿಂದ ಈ ಕೆಲಸ ಮಾಡುತ್ತಿದ್ದು ಹೆಚ್ಚಿನ ತನಿಖೆ ಆಗಬೇಕಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm