ಬ್ರೇಕಿಂಗ್ ನ್ಯೂಸ್
16-07-26 09:26 pm HK News Staffer ಕ್ರೈಂ
ಮಂಗಳೂರು, ಜುಲೈ 16: ಏಕಮುಖದ ಪ್ರೀತಿ, ಆಕೆ ತನಗೇ ಸಿಗಬೇಕು, ತಾನಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಲೇಬಾರದು ಅನ್ನುವ ಹುಚ್ಚುತನ ಮತ್ತು ಲಂಪಟ ಪ್ರೀತಿಗೆ ಅಮಾಯಕ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬಿ.ಸಿ ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿರುವ ಘಟನೆ ಆಸುಪಾಸಿನ ಜನರನ್ನು ಬೆಚ್ಚಿಬೀಳಿಸಿದೆ.
ಕಕ್ಯಪದವು ನಿವಾಸಿಯಾಗಿರುವ ಲಾವಣ್ಯ(21) ಎಂಬ ಹುಡುಗಿ ಎರಡು ತಿಂಗಳ ಹಿಂದಷ್ಟೇ ಕಲ್ಲಡ್ಕದಲ್ಲಿ ಖಾಸಗಿ ಆಸ್ಪತ್ರೆಯೊಂದರ ಮೆಡಿಕಲ್ ಸ್ಟೋರ್ ನಲ್ಲಿ ಕೆಲಸಕ್ಕೆ ಸೇರಿದ್ದಳು. ಆದರೆ ಅದಕ್ಕೂ ಮೊದಲೇ ಆಕೆಯ ದೂರದ ಸಂಬಂಧಿಯಾಗಿದ್ದ 22 ವರ್ಷದ ಚೇತನ್ ಗೌಡ ಎಂಬ ಹುಡುಗ ಯುವತಿಯ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸಬೇಕು, ತನ್ನನ್ನೇ ಮದುವೆಯಾಗಬೇಕೆಂಬ ಹುಚ್ಚುತನವನ್ನು ಬೆಳೆಸಿಕೊಂಡು ಆಕೆಯನ್ನು ಹಿಂಬಾಲಿಸತೊಡಗಿದ್ದ.





ಆದರೆ ಹುಡುಗಿ ಮಾತ್ರ ಸಪೂರ ದೇಹದ ಚೇತನ್ ಗೌಡನನ್ನು ಮದುವೆಯಾಗಲು ನಿರಾಕರಿಸಿದ್ದಳು ಎನ್ನಲಾಗಿದೆ. ಆತ ಫೋನ್ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ. ಏನೇನೋ ಮೆಸೇಜ್ ಮಾಡಿ ಹಿಂದೆ ಬಿದ್ದಿದ್ದರಿಂದ ಹುಡುಗಿಯೂ ಬೆದರಿ ಹೋಗಿದ್ದಳು. ಇಂದು ತನ್ನ ಜೊತೆಗೆ ಬರದಿದ್ದರೆ ಕೊಂದು ಬಿಡುತ್ತೇನೆಂಬ ಬೆದರಿಕೆಯನ್ನೂ ಹಾಕಿದ್ದನೆಂದು ಹೇಳಲಾಗುತ್ತಿದೆ. ಸಂಜೆ ಮೆಡಿಕಲ್ ನಿಂದ ಹೊರಡುವಾಗಲೇ ಈ ಬಗ್ಗೆ ಹುಡುಗಿ ತನ್ನ ಹತ್ತಿರದ ಸಂಬಂಧಿಕರಿಗೆ ತಿಳಿಸಿದ್ದಳು. ಎಂದಿನಂತೆ ಬಿಸಿ ರೋಡಿಗೆ ಬಂದು ಕಕ್ಯಪದವು ಹೋಗುವ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿದ್ದಾಗಲೇ ಚೇತನ್ ಕಾರಿನಲ್ಲಿ ಬಂದಿದ್ದನ್ನು ಆಕೆ ಕಂಡಿದ್ದಳು. ಹೊರಗಡೆಯಿಂದ ಬಸ್ಸಿನಿಂದ ಇಳಿದು ಬಾ ಎಂದು ಹೇಳುತ್ತಾ ಬರುತ್ತಿದ್ದುದನ್ನು ನೋಡಿದ ಆಕೆ ನಿಂತಿದ್ದ ಬಸ್ಸಿನಿಂದ ಕೆಳಕ್ಕಿಳಿದು ಓಟಕ್ಕೆ ಶುರು ಮಾಡಿದ್ದಳು. ಆದರೆ ಅಷ್ಟರಲ್ಲೇ ತನ್ನ ಕೈಲಿದ್ದ ಕತ್ತಿಯಿಂದ ಆಕೆಯ ಕತ್ತಿಗೆ ಬೀಸಿದ್ದು ಕೆಳಕ್ಕೆ ಕುಸಿದು ಬಿದ್ದಾಗಲೂ ಆಕೆಯ ಮೇಲೆ ಕತ್ತಿಯಿಂದ ಯದ್ವಾತದ್ವಾ ಕಡಿದಿದ್ದಾನೆ. ಈ ವೇಳೆ, ಬಸ್ ನಿಲ್ದಾಣದಲ್ಲಿ ಅಷ್ಟೇನೂ ಜನರು ಇಲ್ಲದಿದ್ದರೂ ಇದ್ದವರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದರೇ ವಿನಾ ತಡೆಯುವ ಕೆಲಸ ಮಾಡಿರಲಿಲ್ಲ. ಸ್ಥಳದಲ್ಲೇ ಕುಸಿದು ಬಿದ್ದ ಯುವತಿ ಸಾವು ಕಂಡಿದ್ದಳು.
ಕೃತ್ಯ ಎಸಗಿ ಅಲ್ಲಿಂದ ಓಡುತ್ತಿರುವ ವಿಡಿಯೋ ಕೂಡ ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ಆತ ತಾನು ಬಂದಿದ್ದ ಕಾರಿನಲ್ಲೇ ತೆರಳಿದ್ದು ಎಲ್ಲಾದರೂ ಹೋಗಿ ಸಾವಿಗೆ ಶರಣಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿ ಚೇತನ್ ಗೌಡ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ನಿವಾಸಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೊಲೆಯಾದ ಕೂಡಲೇ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು ಮಾಂಸದ ಮುದ್ದೆಯಾದಗಿ ಬಿದ್ದಿದ್ದ ಹುಡುಗಿಯ ಶವವನ್ನು ಬಟ್ಟೆಯಲ್ಲಿ ಮುಚ್ಚಿ ಆಸ್ಪತ್ರೆಗೆ ಸಾಗಿಸಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm