ಬ್ರೇಕಿಂಗ್ ನ್ಯೂಸ್
22-07-26 09:03 pm HK News Desk ಕ್ರೈಂ
ಮಂಗಳೂರು, ಜುಲೈ 22 ಮತದಾರರ ಪಟ್ಟಿಯ ದಾಖಲೆ ಪರಿಷ್ಕರಣೆ (SIR) ‘ಮಿಸ್ಮ್ಯಾಚ್’ ನೆಪ ಒಡ್ಡಿ, ನಕಲಿ APK ಫೈಲ್ ಕಳುಹಿಸಿ ಆ್ಯಪ್ ಡೌನ್ಲೋಡ್ ಮಾಡಿಸುವ ಮೂಲಕ 71 ವರ್ಷದ ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹6,82,082 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಜುಲೈ 17ರಂದು ಸಂತ್ರಸ್ತ 71 ವರ್ಷದ ವೃದ್ಧ ವ್ಯಕ್ತಿಯ ಮೊಬೈಲ್ಗೆ “ನಿಮ್ಮ SIR ಪರಿಶೀಲನೆ ಮಿಸ್ ಮ್ಯಾಚ್ ಆಗಿದೆ, ತಕ್ಷಣ 8638932992 ಸಂಖ್ಯೆಯನ್ನು ಸಂಪರ್ಕಿಸಿ” ಎಂದು ಮೆಸೇಜ್ ಬಂದಿತ್ತು. ಇದನ್ನು ನಂಬಿ ಜುಲೈ 18 ರಂದು ಸದ್ರಿ ಸಂಖ್ಯೆಗೆ ವಾಟ್ಸ್ಆ್ಯಪ್ ಮೆಸೇಜ್ ಮಾಡಿದ್ದು, 48 ಗಂಟೆಗಳಲ್ಲಿ ಸಂಪರ್ಕಿಸುವುದಾಗಿ ಸೈಬರ್ ವಂಚಕರಿಂದ ಮರುಪರಿಶೀಲನೆ ಸಂದೇಶ ಬಂದಿತ್ತು.
ಜುಲೈ 20ರಂದು ಸಂಜೆ +91 9101633409 ಸಂಖ್ಯೆಯಿಂದ ವಾಟ್ಸ್ಆ್ಯಪ್ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮತದಾರರ ಪರಿಶೀಲನೆ ಲಿಂಕ್ ಕಳುಹಿಸಿ, SIR ಅಪ್ಡೇಟ್ ಮಾಡಲು ದಾಖಲೆಗಳ ವಿವರ ಪಡೆದಿದ್ದೇನೆ. ಪರಿಶೀಲನೆಯ 5 ರೂ. ಶುಲ್ಕ ಪಾವತಿಸುವಂತೆ ತಿಳಿಸಿದ್ದು, ಲಿಂಕ್ ಮೂಲಕ ಹಣ ಪಾವತಿಯಾಗದಿದ್ದಾಗ ಹೊಸ APK ಫೈಲ್ ಒಂದನ್ನು ಕಳುಹಿಸಿ ಡೌನ್ಲೋಡ್ ಮಾಡಲು ಹೇಳಿದ್ದ.
ಸಂತ್ರಸ್ತ ವ್ಯಕ್ತಿ APK ಫೈಲ್ ಡೌನ್ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಜುಲೈ 21ರ ಬೆಳಗ್ಗೆ ಫೋನ್ ಆನ್ ಆಗದೇ ಇದ್ದಾಗ ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ, ಎಚ್ಡಿಎಫ್ಸಿ ಬ್ಯಾಂಕ್ ಕದ್ರಿ ಶಾಖೆಯಲ್ಲಿದ್ದ ಖಾತೆಯಿಂದ ಹಂತ ಹಂತವಾಗಿ ಒಟ್ಟು 6,82,082 ರೂ. ಕಡಿತಗೊಂಡಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm