ಬ್ರೇಕಿಂಗ್ ನ್ಯೂಸ್
27-07-26 09:04 pm HK News Staffer ಕ್ರೈಂ
ಕೋಜಿಕ್ಕೋಡ್, ಜುಲೈ 27: ಕೇರಳ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ನಂಬಿಸಿ ಕಾಂಗ್ರೆಸ್ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಂದ 3 ಕೋಟಿ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ದೆಹಲಿ ಮೂಲದ ನಿತಿನ್ ಮತ್ತು ಗೌರವ್ ಎಂಬ ಇಬ್ಬರನ್ನು ಕೋಝಿಕ್ಕೋಡ್ ನಗರ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಕೋಜಿಕ್ಕೋಡ್ ಜಿಲ್ಲೆಯ ಎಳತ್ತೂರ್ ಕ್ಷೇತ್ರದ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಗೆ ವಂಚಕರು ವಾಟ್ಸ್ಆ್ಯಪ್ ಕರೆ ಮಾಡಿ, 3 ಕೋಟಿ ರೂ. ನೀಡಿದರೆ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಹೇಳಿಸಿ ಕೇರಳ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಮಾಡಿಸಿ ಕೊಡುವುದಾಗಿ ಹೇಳಿ ಆಮಿಷ ಒಡ್ಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ದಿಲ್ಲಿ–ಹರ್ಯಾಣ ಗಡಿಯಿಂದ ಬಂಧಿಸಿದ್ದಾರೆ ಎಂದು ಕೋಝಿಕ್ಕೋಡ್ ಪೊಲೀಸ್ ಆಯುಕ್ತ ಎ.ಪಿ. ಶೌಕತ್ ಅಲಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ವಿಚಾರಣೆ ವೇಳೆ ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ಅವರನ್ನು ದೆಹಲಿಯ ನ್ಯಾಯಾಲಯವೊಂದಕ್ಕೆ ಹಾಜರುಪಡಿಸಿದ ಬಳಿಕ ಟ್ರಾನ್ಸಿಟ್ ಜಾಮೀನಿನಲ್ಲಿ ಕೇರಳಕ್ಕೆ ಕರೆತರಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಇದೇ ಮಾದರಿಯ ವಂಚನೆ ಪ್ರಕರಣಗಳಲ್ಲಿ ಇತರ ರಾಜ್ಯಗಳಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ನಾಶಿಕ್ ನಲ್ಲಿ ಪ್ರಧಾನಿ ಕಾರ್ಯಾಲಯದಿಂದ ಮಾತನಾಡುತ್ತಿರುವುದಾಗಿ ಹೇಳಿ ರಾಜಕೀಯ ಪಕ್ಷದ ನಾಯಕರನ್ನು ವಂಚಿಸಲು ಯತ್ನಿಸಿದ್ದರು. ಇದೇ ರೀತಿಯ ಪ್ರಕರಣಗಳು ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿಯೂ ನಡೆದಿರುವ ಮಾಹಿತಿಯಿದ್ದು, ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಶೌಕತ್ ಅಲಿ ತಿಳಿಸಿದರು.
ವಂಚಕರು ವಾಟ್ಸ್ಆ್ಯಪ್ ಕರೆ ಮಾಡಲು ಬಳಸಿದ್ದ ಸಿಮ್ ಕಾರ್ಡ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ದೆಹಲಿ ಮೂಲದ ದಿನಗೂಲಿ ಕಾರ್ಮಿಕನನ್ನು ವಶಕ್ಕೆ ಪಡೆದಿದ್ದರು. ಆತ ತಾನು ಯಾವುದೇ ಕರೆ ಮಾಡಿಲ್ಲ ಎಂದು ಹೇಳಿದ್ದಲ್ಲದೆ, ಒಂದು ತಿಂಗಳ ಹಿಂದೆ ತನ್ನ ಮೊಬೈಲ್ ಫೋನ್ ಹಾಗೂ ಸಿಮ್ ಎರಡನ್ನೂ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದ. ಬಳಿಕ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಿ, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಲಾಯಿತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಜುಲೈ 6ರಂದು ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಗೆ ವಾಟ್ಸ್ಆ್ಯಪ್ ಕರೆ ಬಂದಿತ್ತು. ಕರೆಯ ಬಗ್ಗೆ ಅನುಮಾನಗೊಂಡ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಸಂಪರ್ಕಿಸಿದ್ದರು. ಬಳಿಕ ಪ್ರಿಯಾಂಕಾ ಗಾಂಧಿಯ ಆಪ್ತ ಕಾರ್ಯದರ್ಶಿಯ ಸೋಗಿನಲ್ಲಿ ವಂಚಕರು ಕರೆ ಮಾಡಿರುವುದು ದೃಢಪಟ್ಟಿತ್ತು. ಶಾಸಕಿ ಬಳಿಕ ಪೊಲೀಸರಿಗೆ ದೂರು ನೀಡಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm