ಬ್ರೇಕಿಂಗ್ ನ್ಯೂಸ್
28-07-26 07:07 pm HK News Staffer ಕ್ರೈಂ
ಮಂಗಳೂರು, ಜುಲೈ 28: ಬಿಸಿ ರೋಡ್ನಲ್ಲಿ ನಡೆದಿದ್ದ ಬಹುಚರ್ಚಿತ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ಯೆ ಆರೋಪಿ ಚೇತನ್ ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೊನೆಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸುಮಾರು 10 ದಿನಗಳ ಬಳಿಕ ಬಂಟ್ವಾಳ ನಗರ ಪೊಲೀಸರು ಆತನನ್ನು ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ.
ಲಾವಣ್ಯ ಹತ್ಯೆ ನಡೆದ ಬಳಿಕ ಆರೋಪಿ ಇಲಿ ಪಾಷಾಣ ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಆತನನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು.
ಆಸ್ಪತ್ರೆಯಿಂದ ಬಿಡುಗಡೆಯಾದ ಕೂಡಲೇ ಬಂಟ್ವಾಳ ನಗರ ಪೊಲೀಸರು ಆರೋಪಿ ಚೇತನ್ನನ್ನು ವಶಕ್ಕೆ ಪಡೆದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ತನಿಖೆಯ ಅಗತ್ಯವನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.


ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ತನಿಖಾಧಿಕಾರಿಗಳು ತಕ್ಷಣವೇ ಮಹಜರು ಪ್ರಕ್ರಿಯೆ ಆರಂಭಿಸಿದ್ದು, ಆರೋಪಿ ಚೇತನ್ನನ್ನು ಕೊಲೆ ನಡೆದ ಬಿಸಿ ರೋಡ್ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಇದೇ ವೇಳೆ ಕೃತ್ಯ ನಡೆದ ಸಂದರ್ಭದ ಬಗ್ಗೆ ಆರೋಪಿ ಬಳಿ ಸ್ಥಳದಲ್ಲೇ ವಿವರವಾದ ವಿಚಾರಣೆ ನಡೆಸಲಾಗಿದೆ.
ತನಿಖೆಯ ಭಾಗವಾಗಿ ಘಟನೆಯ ಸಂಪೂರ್ಣ ಹಿನ್ನೆಲೆ, ಕೊಲೆಗೆ ಬಳಸಿದ ವಸ್ತುಗಳು, ಘಟನಾ ಕ್ರಮ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ. ಪ್ರಕರಣದ ಇನ್ನಷ್ಟು ಮಹತ್ವದ ಮಾಹಿತಿಗಳು ಪೊಲೀಸ್ ಕಸ್ಟಡಿ ವಿಚಾರಣೆಯಲ್ಲಿ ಹೊರಬರುವ ಸಾಧ್ಯತೆ ಇದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm