ಬ್ರೇಕಿಂಗ್ ನ್ಯೂಸ್
30-07-26 08:31 pm HK News Staffer ಕ್ರೈಂ
ಮಂಗಳೂರು, ಜುಲೈ 30: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ತನ್ನನ್ನು ಬ್ರಿಟನ್ ನಿವಾಸಿ ಎಂದು ನಂಬಿಸಿ, ಬಳಿಕ ‘ಉಡುಗೊರೆ ಪಾರ್ಸೆಲ್’ ಹಾಗೂ ‘ಕಸ್ಟಮ್ಸ್ ಕ್ಲಿಯರೆನ್ಸ್’ ನೆಪದಲ್ಲಿ ಗೃಹಣಿಯೊಬ್ಬರಿಂದ ₹2,67,000 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸುಮಾರು ಎರಡು ತಿಂಗಳ ಹಿಂದೆ 46 ವರ್ಷದ ಗೃಹಣಿ ಶ್ರೀಮತಿ ಅವರಿಗೆ ಫೇಸ್ಬುಕ್ನಲ್ಲಿ “ಡಾ. ವಿಲಿಯಮ್ಸ್ ಹೆರ್ಬರ್ಟ್” ಎಂಬ ಹೆಸರಿನ ಪ್ರೊಫೈಲ್ನಿಂದ ಸ್ನೇಹದ ವಿನಂತಿ ಬಂದಿತ್ತು. ತಾನು ಯುನೈಟೆಡ್ ಕಿಂಗ್ಡಮ್ (UK) ಮೂಲದ ವೈದ್ಯ ಎಂದು ಪರಿಚಯಿಸಿಕೊಂಡಿದ್ದ ಆತ, ಬಳಿಕ ವಾಟ್ಸಾಪ್ ಹಾಗೂ ಫೇಸ್ಬುಕ್ ಮೆಸೆಂಜರ್ ಮೂಲಕ ನಿರಂತರ ಸಂಪರ್ಕದಲ್ಲಿದ್ದು ಮಹಿಳೆಯ ವಿಶ್ವಾಸ ಗಳಿಸಿದ್ದ.
ಜೂನ್ 28ರಂದು ವಾಟ್ಸಾಪ್ ಕರೆ ಮಾಡಿದ ಆರೋಪಿ, “ನಿಮಗಾಗಿ ಚಾಕೊಲೇಟ್, ಚಿನ್ನ, ಬ್ಯಾಗ್ ಹಾಗೂ ಅಪಾರ ಪ್ರಮಾಣದ ಹಣವಿರುವ ಉಡುಗೊರೆ ಪಾರ್ಸೆಲ್ ಕಳುಹಿಸಿದ್ದೇನೆ” ಎಂದು ಹೇಳಿ ಮಹಿಳೆಯನ್ನು ನಂಬಿಸಿದ್ದಾನೆ.
ಮರುದಿನ ಮತ್ತೊಬ್ಬ ವ್ಯಕ್ತಿ 'ಕಸ್ಟಮ್ಸ್ ಅಧಿಕಾರಿ' ಎಂದು ಪರಿಚಯಿಸಿಕೊಂಡು ಕರೆ ಮಾಡಿ, “ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ವಿಮಾನ ನಿಲ್ದಾಣದ ಕಸ್ಟಮ್ಸ್ನಲ್ಲಿ ತಡೆಹಿಡಿಯಲಾಗಿದೆ. ಲಗೇಜ್ ಚಾರ್ಜ್ ಪಾವತಿಸಿದರೆ ಬಿಡುಗಡೆ ಮಾಡುತ್ತೇವೆ” ಎಂದು ಹೇಳಿದ್ದಾನೆ.
'ಚಿನ್ನ ವಶಪಡಿಸಿಕೊಂಡಿದ್ದೇವೆ' ಎಂದು ಹೆದರಿಸಿ ಹಣ ವಸೂಲಿ
ಇದನ್ನು ನಂಬಿದ ಮಹಿಳೆ ಆರಂಭದಲ್ಲಿ ಫೋನ್ಪೇ ಮೂಲಕ ₹28,000 ಪಾವತಿಸಿದ್ದಾರೆ. ಬಳಿಕ “ಪಾರ್ಸೆಲ್ನಲ್ಲಿದ್ದ ಚಿನ್ನ ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೆದರಿಸಿ, ವಿವಿಧ ಹಂತಗಳಲ್ಲಿ ₹50,000, ₹26,000, ₹20,000 ಸೇರಿದಂತೆ, ಮಹಿಳೆಯ ಅಣ್ಣನ ಮಗನ ಫೋನ್ಪೇ ಖಾತೆಯಿಂದಲೂ ₹26,000 ಹಾಗೂ ₹30,000 ಪಡೆದು ಒಟ್ಟು ₹1,52,000 ವಂಚಿಸಿದ್ದಾರೆ.
ಅಷ್ಟಕ್ಕೂ ನಿಲ್ಲದ ವಂಚಕರು, ಜುಲೈ 8ರಂದು ಮತ್ತೊಂದು ಸಂಖ್ಯೆಯಿಂದ ಕರೆ ಮಾಡಿ, “ಸಮಯಕ್ಕೆ ಪಾರ್ಸೆಲ್ ಪಡೆಯದ ಕಾರಣ ಪೆನಾಲ್ಟಿ ಚಾರ್ಜ್ ಪಾವತಿಸಬೇಕು” ಎಂದು ಹೇಳಿದ್ದರು. ಇದನ್ನೂ ನಂಬಿದ ಮಹಿಳೆ ಜುಲೈ 9ರಂದು ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ ಚೆಕ್ ಮೂಲಕ ₹87,000 ವರ್ಗಾಯಿಸಿದ್ದಾರೆ.
ಒಟ್ಟಾರೆ ₹2,67,000 ಹಣ ಪಾವತಿಸಿದ ಬಳಿಕವೂ ಆರೋಪಿಗಳು ಮತ್ತೆ ಹಣಕ್ಕಾಗಿ ಒತ್ತಾಯಿಸುತ್ತಿದ್ದಾಗ ಮಹಿಳೆಗೆ ತಾನು ಸೈಬರ್ ವಂಚಕರ ಬಲೆಗೆ ಬಿದ್ದಿರುವುದು ಅರಿವಾಗಿದೆ. ತಕ್ಷಣ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm