ಬ್ರೇಕಿಂಗ್ ನ್ಯೂಸ್
31-07-26 08:30 pm HK News Staffer ಕ್ರೈಂ
ಉಡುಪಿ, ಜುಲೈ 31 : ಕುಂದಾಪುರದ ಹೋಲಿ ರೋಸರಿ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಡೆದ ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಣಕಾಸು ದ್ವೇಷವೇ ಕಾರಣ ಎನ್ನುವ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಕುಂದಾಪುರದ ಡೆರಿಕ್ ಎನ್ನುವ ಸ್ನೇಹಿತನೇ ತೀರಾ ಹತ್ತಿರದಿಂದ ಸೊಂಟದ ಕೆಳಗೆ ಶೂಟ್ ಮಾಡಿ ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಉಡುಪಿ ಎಸ್ಪಿ ಹರಿರಾಮ್ ಶಂಕರ್, ಗುರುವಾರ ರಾತ್ರಿ ಸುಮಾರು 11.45ರಿಂದ ಮುಂಜಾನೆಯ ವರೆಗೆ ಕುಂದಾಪುರ ಮೂಲದ ಡೆರಿಕ್ ಹಾಗೂ ಬಾರ್ಕೂರು ಮೂಲದ ಐವನ್ ನಡುವೆ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನ್ನಲ್ಲಿ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ‘ಧೈರ್ಯವಿದ್ದರೆ ಕುಂದಾಪುರಕ್ಕೆ ಬಾ, ಇಲ್ಲೇ ಸೆಟಲ್ ಮಾಡೋಣ’ ಎಂದು ಡೆರಿಕ್, ಐವಾನ್ಗೆ ಸವಾಲು ಹಾಕಿದ್ದ. ಚಾಲೆಂಜ್ ಸ್ವೀಕರಿಸಿದ ಐವಾನ್ ತನ್ನ ಕಾರಿನಲ್ಲಿ ಆಗಮಿಸಿ ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರು ನಿಲ್ಲಿಸಿದ್ದರು.

ಐವಾನ್ ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತನ್ನ ಕಾರಿನಲ್ಲಿ ಬಂದಿಳಿದ ಆರೋಪಿ ಡೆರಿಕ್, ಏಕಾಏಕಿ ಪಿಸ್ತೂಲ್ ತೆಗೆದು ಐವಾನ್ ಅವರ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದಾಗಿ ಐವಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಡೆರಿಕ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.
ಘಟನೆ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಣಿಪಾಲದ ಫೊರೆನ್ಸಿಕ್ ವಿಭಾಗಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಸ್ಥಳದಲ್ಲಿ ವಿಧಿ ವಿಜ್ಞಾನ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿ ಡೆರಿಕ್ ಬಂಧನಕ್ಕೆ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ.
ಮೃತ ಐವಾನ್ ರಿಚರ್ಡ್ ಉಡುಪಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಈ ಹಿಂದೆ ಪಿಟ್ಟಿ ನಾಗೇಶ್ ಕೊಲೆಯಲ್ಲಿ ಆರೋಪಿಯಾಗಿದ್ದ. ಇದೀಗ ಹಣಕಾಸು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm