ಬ್ರೇಕಿಂಗ್ ನ್ಯೂಸ್
07-08-26 09:23 pm HK News Staffer ಕ್ರೈಂ
ಉಳ್ಳಾಲ, ಆ.7: ಮುಡಿಪು ಸಮೀಪದ ಕಾಯರ್ ಗೋಳಿ ಎಂಬಲ್ಲಿನ ಮನೆಯೊಂದಕ್ಕೆ ಹಾಡಹಗಲೇ ನುಗ್ಗಿ ಒಂಟಿ ವೃದ್ಧೆಯೋರ್ವರಿಗೆ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಬಲೆಗಳನ್ನು ದರೋಡೆಗೈದು ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನ ಕೊಣಾಜೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉರ್ವಾ ಮಠದಕಣಿ ನಿವಾಸಿ ಬಾಲಸುಬ್ರಮಣ್ಯ(49) ಹಾಗೂ ಮೂಲತಃ ತೊಕ್ಕೊಟ್ಟು ನಿವಾಸಿ ಪ್ರಸ್ತುತ ಮಂಗಳೂರಿನ ಬೊಕ್ಕಪಟ್ಣದಲ್ಲಿ ನೆಲೆಸಿರುವ ಶ್ಯಾಮ್ ಕುಮಾರ್ (33) ಬಂಧಿತ ಆರೋಪಿಗಳು. ಮುಡಿಪು ಕಾಯರ್ ಗೋಳಿಯ 76 ರ ಹರೆಯದ ಭವಾನಿ ಆಚಾರ್ಯ ಎಂಬವರ ಮನೆಯಲ್ಲಿ ಆ.3ರ ಸೋಮವಾರ ದರೋಡೆ ಘಟನೆ ನಡೆದಿತ್ತು. ಭವಾನಿಯವರ ಪುತ್ರ ಕೆಲಸಕ್ಕೆ ತೆರಳಿದ್ದ ವೇಳೆ ಬಾಡಿಗೆ ಮನೆಯ ಬಗ್ಗೆ ವಿಚಾರಿಸುವ ಸೋಗಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಏಕಾಏಕಿ ಮನೆಯೊಳಗೆ ನುಗ್ಗಿ ವೃದ್ಧೆಗೆ ಹಲ್ಲೆಗೈದು ಸರ ಹಾಗೂ ಬಲೆಯನ್ನು ಕಿತ್ತು ಪರಾರಿಯಾಗಿದ್ದರು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ರಚಿಸಿದ ವಿಶೇಷ ತಂಡಕ್ಕೆ ದೊರೆತ ಖಚಿತ ಮಾಹಿತಿಯ ಮೇಲೆ ಶುಕ್ರವಾರ ಮಂಗಳೂರಿನ ಮರೋಳಿ ಎಂಬಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಸುಲಿಗೆ ಮಾಡಲಾದ 3 ಲಕ್ಷ ರೂ. ಅಂದಾಜು ಮೌಲ್ಯದ 24 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಲಾದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.
ಬಂಧಿತ ಆರೋಪಿ ಬಾಲ ಸುಬ್ರಮಣ್ಯ ವಿರುದ್ಧ ಈ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಸುಲಿಗೆ ಪ್ರಕರಣಗಳು, ಮುಲ್ಕಿ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ತಲಾ 1 ಸುಲಿಗೆ ಪ್ರಕರಣಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ ದಾಖಲಾಗಿರುತ್ತವೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm