ಬ್ರೇಕಿಂಗ್ ನ್ಯೂಸ್
11-08-26 05:28 pm HK News Staffer ಕ್ರೈಂ
ಕಾರ್ಕಳ, ಆ.11: ಫೇಸ್ಬುಕ್ ಜಾಹೀರಾತು ಮತ್ತು ವಾಟ್ಸ್ಆ್ಯಪ್ ಗ್ರೂಪ್ಗಳ ಮೂಲಕ ಶೇರ್ ಮಾರ್ಕೆಟ್ ಹಾಗೂ ಐಪಿಒ ಹೂಡಿಕೆಯಲ್ಲಿ ದುಪ್ಪಟ್ಟು ಲಾಭ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹32,68,000 ಹಣವನ್ನು ಪಡೆದು ವಂಚಿಸಿರುವ ಆಘಾತಕಾರಿ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಲಕ್ಷ್ಮಣ್ ಎಂಬವರಿಗೆ ಜುಲೈ 17 ರಂದು ಫೇಸ್ಬುಕ್ನಲ್ಲಿ ವೀಡಿಯೊ ಜಾಹೀರಾತೊಂದು ಬಂದಿತ್ತು. ಅದರಲ್ಲಿ ‘JB (Julius Baer VIP Group)’ ಹಾಗೂ ‘5paisa’ ಆ್ಯಪ್ಗಳ ಮೂಲಕ ಹಣ ಹೂಡಿಕೆ ಮಾಡಿದರೆ ಶೇರ್ ಮಾರ್ಕೆಟ್ನಲ್ಲಿ ದ್ವಿಗುಣ ಲಾಭ ಗಳಿಸಬಹುದು ಎಂದು ಭರವಸೆ ನೀಡಲಾಗಿತ್ತು. ವೀಡಿಯೊದಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದಾಗ ಲಕ್ಷ್ಮಣ್ ಅವರು ‘JB (Julius Baer VIP Group)’ ಮತ್ತು ‘5paisa’ ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ಗಳಿಗೆ ಜಾಯಿನ್ ಆಗಿದ್ದರು.
ವಾಟ್ಸ್ಆ್ಯಪ್ ಗ್ರೂಪ್ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಹೆಚ್ಚಿನ ಲಾಭಾಂಶ ತಂದುಕೊಡುವ ಶೇರುಗಳು ಹಾಗೂ IPO ಗಳಲ್ಲಿ ಹೂಡಿಕೆ ಮಾಡುವಂತೆ ಪ್ರಚೋದಿಸಿದ್ದರು. ಅವರ ಮಾತು ನಂಬಿದ ಲಕ್ಷ್ಮಣ್ ಅವರು ಜುಲೈ 17 ರಿಂದ ಆಗಸ್ಟ್ 04, 2026 ರ ವರೆಗಿನ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು ₹32,68,000/- ಹಣವನ್ನು ಅಪರಿಚಿತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಹಣ ವರ್ಗಾವಣೆಯಾದ ಬಳಿಕ ಅಪರಿಚಿತ ವ್ಯಕ್ತಿಗಳು ಹೂಡಿಕೆ ಮಾಡಿದ ಅಸಲು ಹಣವನ್ನಾಗಲಿ ಅಥವಾ ಭರವಸೆ ನೀಡಿದ್ದ ಲಾಭಾಂಶವನ್ನಾಗಲಿ ನೀಡದೆ ನಂಬಿಸಿ ಮೋಸ ಮಾಡಿದ್ದಾರೆ. ಈ ಕುರಿತು ಸಂತ್ರಸ್ತ ಲಕ್ಷ್ಮಣ್ ನೀಡಿದ ದೂರಿನನ್ವಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm