ಬ್ರೇಕಿಂಗ್ ನ್ಯೂಸ್
28-08-26 04:17 pm HK News Staffer ಕ್ರೈಂ
ಉಡುಪಿ, ಆ.28: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವೇಳೆ ವಿಮಾನ ಪತನಗೊಂಡು ಉಡುಪಿ ಮೂಲದ 22 ವರ್ಷದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಕೊನೆಯುಸಿರೆಳೆದಿದ್ದಾರೆ.
ಮೃತ ಅಭಿಷೇಕ್ ಪೂಜಾರಿ ಮುಂಬೈನಲ್ಲಿ ವಾಸವಾಗಿದ್ದು, ಮೂಲತಃ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ನಿವಾಸಿಗಳಾದ ಪ್ರಭಾಕರ ಪೂಜಾರಿ ಹಾಗೂ ಶಶಿಕಲಾ ಪೂಜಾರಿ ದಂಪತಿಯ ಪುತ್ರ.
ಎರಡೂವರೆ ವರ್ಷದಿಂದ ಪೈಲಟ್ ತರಬೇತಿ;
ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ವಿಮಾನ ಹಾರಾಟದ ತರಬೇತಿ ಪಡೆಯುತ್ತಿದ್ದ ವೇಳೆ ನಡೆದ ಅಪಘಾತ ಅವರ ಬದುಕನ್ನೇ ದುರಂತವಾಗಿ ಅಂತ್ಯಗೊಳಿಸಿದೆ.
ಅಭಿಷೇಕ್ ಅವರು ಆಗಾಗ್ಗೆ ತಮ್ಮ ಕುಟುಂಬದೊಂದಿಗೆ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.
ಕುಟುಂಬಸ್ಥರು ಕಾನ್ಪುರಕ್ಕೆ;
ವಿಮಾನ ಪತನದ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಷೇಕ್ ಅವರ ಕುಟುಂಬಸ್ಥರು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಮೃತದೇಹ ಹಸ್ತಾಂತರ ಸೇರಿದಂತೆ ಅಗತ್ಯ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೈಲಟ್ ಆಗುವ ಕನಸು ಹೊತ್ತು ತರಬೇತಿ ಪಡೆಯುತ್ತಿದ್ದ ಉಡುಪಿ ಮೂಲದ ಯುವಕನ ದುರಂತ ಸಾವು ಕುಟುಂಬಸ್ಥರು ಹಾಗೂ ಆತ್ಮೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm