ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am