ಬ್ರೇಕಿಂಗ್ ನ್ಯೂಸ್
01-09-26 02:58 pm HK News Staffer ಕ್ರೈಂ
ಧಾರವಾಡ , ಸೆಪ್ಟೆಂಬರ್ 1: ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಮೃತಪಟ್ಟಿದ್ದಾರೆ. ಅಭಿಷೇಕ್, ಅಜಯ್ ಹಾಗೂ ಬಸನಗೌಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಕಡೆಯಿಂದ ಧಾರವಾಡದತ್ತ ಬರುತ್ತಿದ್ದ ಕಾರು, ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ಕಾರು ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತಕ್ಕೀಡಾದ ಕಾರು ಬೆಳಗಾವಿ ಕಡೆಯಿಂದ ದಾವಣಗೆರೆಯತ್ತ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಗರಗ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ವಾಹನಗಳ ಚಲನವಲನದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
01-09-26 12:19 pm
HK News Staffer
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
01-09-26 11:17 pm
HK News Desk
ಕೆಆರ್ ಐಡಿಎಲ್ ಕಮಿಷನ್ ಆರೋಪದ ಬಗ್ಗೆ ಸಚಿವ ಖಂಡ್ರೆ...
01-09-26 09:05 pm
ಬೆಂಗಳೂರು ಬಿಟ್ಟು ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ...
01-09-26 01:47 pm
Ashok Rai, Puttur News: 'ಉಸ್ತುವಾರಿ ಸಚಿವರಿಗೆ ಹ...
31-08-26 11:04 pm
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
02-09-26 10:37 am
HK News Staffer
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm
Thokottu Accident, Mangalore: ಪಾದಚಾರಿಗೆ ಡಿಕ್ಕ...
01-09-26 01:41 pm
ಶಿವಮೊಗ್ಗದ ಪಿಡಿಒ ದಂಪತಿಗಳ ಮನೆಗೆ ಲೋಕಾ ದಾಳಿ ಅಲ್ಲ....
01-09-26 12:53 pm