ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am