ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am