ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm