ಬ್ರೇಕಿಂಗ್ ನ್ಯೂಸ್
18-01-21 11:31 am Mangalore Correspondent ಕ್ರೈಂ
ಮಂಗಳೂರು , ಜ.18 : ಫೇಸ್ಬುಕ್ ಮೂಲಕ ಪರಿಚಯ ಮಾಡಿಕೊಂಡು ಕೇರಳ ಮೂಲದವರನ್ನು ತಮ್ಮ ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಕಾಟಿಪಳ್ಳದ ಕೃಷ್ಣಾಪುರದ ಅಕ್ಕ, ತಂಗಿಯರು ಸೇರಿ ದಂಪತಿ ಹಾಗೂ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕಾಟಿಪಳ್ಳ ಕೃಷ್ಣಾಪುರದ ರೇಷ್ಮಾ ಅಲಿಯಾಸ್ ನೀಮಾ, ಆಕೆಯ ತಂಗಿ ಜೀನತ್ ಮುಬೀನ್, ಜೀನತ್ ಗಂಡ ಮಹಮ್ಮದ್ ಇಕ್ಬಾಲ್ ಮತ್ತು ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಖಾದರ್ ನಾಸಿಫ್ ಬಂಧಿತರು.


ನೀಮಾ ಮತ್ತು ಮುಬೀನ್ ಸೋದರಿಯರಾಗಿದ್ದು ಫೇಸ್ಬುಕ್ ಮೂಲಕ ಯುವಕರನ್ನು ಪರಿಚಯ ಮಾಡಿಕೊಂಡು ಬಲೆ ಬೀಸುತ್ತಿದ್ದರು. ಕೇರಳ ಮೂಲದವರನ್ನು ಪರಿಚಯಿಸಿಕೊಂಡು ಸ್ನೇಹ ಬೆಳೆಸುತ್ತಾ ಮನೆಯಲ್ಲಿ ಒಬ್ಬಂಟಿಯಾಗಿದ್ದು ಮನೆಗೆ ಬರುವಂತೆ ಆಹ್ವಾನ ನೀಡುತ್ತಾರೆ. ಸುರತ್ಕಲ್ ಬಳಿಗೆ ಬರಲು ಹೇಳಿ, ಅಲ್ಲಿಂದ ಬಂದವರ ವಾಹನದಲ್ಲೇ ತಾವು ಇರುತ್ತಿದ್ದ ಅಪಾರ್ಟ್ಮೆಂಟ್ ಗೆ ಕರೆದೊಯ್ಯುತ್ತಿದ್ದರು. ಮನೆಗೆ ತೆರಳುವಷ್ಟರಲ್ಲಿ ಹಿಂದಿನಿಂದಲೇ ಇಕ್ಬಾಲ್ ಮತ್ತು ನಾಸೀಫ್ ಫಾಲೋ ಮಾಡಿಕೊಂಡು ಬರುತ್ತಿದ್ದುದಲ್ಲದೆ ಮನೆಯ ಒಳಗೆ ಹೋಗುತ್ತಿದ್ದಂತೆ ತಮ್ಮ ಮನೆಗೆ ಬಂದ ಆಗಂತುಕರ ರೀತಿ ವರ್ತಿಸುತ್ತಿದ್ದರು. ಅವರನ್ನು ವಿವಸ್ತ್ರಗೊಳಿಸಿ ಫೋಟೊ ತೆಗೆದು, ಅತ್ಯಾಚಾರ ಕೇಸು ದಾಖಲಿಸುತ್ತೇವೆಂದು ಬೆದರಿಸುತ್ತಿದ್ದರು. ಇಂತಿಷ್ಟು ಹಣ ಕೊಟ್ಟರೆ ಬಿಡುತ್ತೇವೆಂದು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಖದೀಮರ ವೃತ್ತಾಂತ ಬಿಚ್ಚಿಟ್ಟ 5 ಲಕ್ಷದ ಪ್ರಕರಣ !
ಇತ್ತೀಚೆಗೆ ಇದೇ ರೀತಿ ಕಾಸರಗೋಡಿನ ಕುಂಬಳೆಯ ವ್ಯಕ್ತಿಯನ್ನು ಬಲೆಗೆ ಬೀಳಿಸಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟ ಬಗ್ಗೆ ಪ್ರಕರಣ ದಾಖಲಾಗಿತ್ತು. ಕಾಸರಗೋಡಿನ ಕುಂಬಳೆ ಮೂಲದ ಯುವಕನಿಗೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಕೃಷ್ಣಾಪುರದ ಮಹಿಳೆಯರು, ಸುರತ್ಕಲ್ ಸಮೀಪದ ಕೃಷ್ಣಾಪುರಕ್ಕೆ ಬರುವಂತೆ ತಿಳಿಸಿದ್ದರು. ಮಹಿಳೆಯರ ಜೊತೆ ತೆರಳಿದ್ದ ಕುಂಬಳೆಯ ಯುವಕನನ್ನು ಮತ್ತಿಬ್ಬರು ಯುವಕರು ಸೇರಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಫೋಟೋ ತೆಗೆದು 5 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಯುವಕ ವಿಧಿಯಿಲ್ಲದೆ ತನ್ನ ಕಾರನ್ನು ಒತ್ತೆಯಿಟ್ಟು ಹಣ ಮತ್ತೆ ಕೊಡುವುದಾಗಿ ಹೇಳಿ ತೆರಳಿದ್ದ. ಆದರೆ, ಹಣಕ್ಕಾಗಿ ತಂಡ ಮತ್ತೆ ಪೀಡಿಸತೊಡಗಿತ್ತು. ಕಿರುಕುಳ ಹೆಚ್ಚಿದ್ದರಿಂದ ಯುವಕ ಕೊನೆಗೆ ಮಂಗಳೂರು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ದೂರು ಪಡೆದು, ಯುವಕನ ಮೂಲಕವೇ ತಂಡವನ್ನು ಟ್ರ್ಯಾಪ್ ಮಾಡಿದ್ದರು. 30 ಸಾವಿರ ರೂ. ನೀಡುವುದಾಗಿ ಯುವಕ ಆರೋಪಿಗಳನ್ನು ಮಂಗಳೂರಿನ ಪಂಪ್ವೆಲ್ಗೆ ಬರುವಂತೆ ಸೂಚಿಸಿದ್ದ. ಹಣ ಪಡೆಯಲು ಬಂದ ಸಂದರ್ಭ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಬಳಿಕ ಪ್ರಕರಣವನ್ನು ಸುರತ್ಕಲ್ ಪೊಲೀಸರಿಗೆ ಹಸ್ತಾಂತರಿಸಿದ್ದು ಆರೋಪಿಗಳ ಮೊಬೈಲ್ ಪಡೆದು ವಿಚಾರಣೆಗೆ ಒಳಪಡಿಸಿದಾಗ ಹೈಟೆಕ್ ಹನಿಟ್ರ್ಯಾಪ್ ಜಾಲ ಬಯಲಾಗಿದೆ. ಇದೇ ತಂಡದಿಂದ ಹಲವಾರು ಮಂದಿಗೆ ವಂಚನೆ ನಡೆಸಿದ್ದು ಬೆಳಕಿಗೆ ಬಂದಿದೆ. ಆರೋಪಿಗಳ ಮೊಬೈಲಿನಲ್ಲಿ ಹಲವರ ಜೊತೆ ಚಾಟ್ ಮಾಡಿ, ಬ್ಲಾಕ್ ಮೇಲ್ ಮಾಡಿರುವ ವಿಚಾರ ಪತ್ತೆಯಾಗಿದೆ. ಮೋಸಕ್ಕೊಳಗಾದ ಮತ್ತೆ ನಾಲ್ವರನ್ನು ಸಂಪರ್ಕಿಸಲಾಗಿದೆ ಎಂದು ಪ್ರಕರಣದ ಬಗ್ಗೆ ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
The CCB police have arrested four persons including two women involved in Honey Trap in Surathkal via Facebook and for demanding 5 Lakhs rupees.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm