ಬ್ರೇಕಿಂಗ್ ನ್ಯೂಸ್
18-01-21 06:56 pm Mangalore Correspondent ಕ್ರೈಂ
ಉಳ್ಳಾಲ, ಜ.18: ಹದಿನೈದು ವರ್ಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಬ್ರಾಹ್ಮಣ ಹೆಣ್ಮಗಳನ್ನು ಗಂಡನಿಂದ ದೂರವಾದ ಬಳಿಕ ಉಳ್ಳಾಲ ಎಸ್ ಡಿಪಿಐ ಮುಖಂಡನೊಬ್ಬ ಆಕೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಲ್ಲದೆ ಇಬ್ಬರು ಸಣ್ಣ ಮಕ್ಕಳಿಗೂ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಎಸ್ ಡಿಪಿಐ ಉಳ್ಳಾಲ ಸಮಿತಿ ಕ್ಷೇತ್ರಾಧ್ಯಕ್ಷ ಸಿದ್ದೀಕ್ ಉಳ್ಳಾಲ್ ಕಾಮುಕ ಕೃತ್ಯ ನಡೆಸಿರುವ ಆರೋಪಿಯಾಗಿದ್ದು ಕೇಸು ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಜನವರಿ 16 ರಂದು ಈತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು ಪೊಲೀಸರು ಗಂಭೀರ ಪ್ರಕರಣವನ್ನು ಹೊರಗೆ ಬಾರದಂತೆ ಮುಚ್ಚಿಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ.
ಕೊಣಾಜೆ ನಡುಪದವಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಬ್ರಾಹ್ಮಣ ಯುವತಿಯನ್ನು ಕೇರಳ ಮೂಲದ ಮುಸ್ಲಿಂ ಯುವಕ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆಕೆಯನ್ನ ಮುಸ್ಲಿಂ ಆಗು ಮತಾಂತರಗೊಳಿಸಿದ್ದ. ಮತಾಂತರ ನಂತರ ಯುವತಿ ಆಕೆಯ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಂಡಿದ್ದಳು. ಯುವತಿಯನ್ನು ಪ್ರೀತಿಸಿ ಮದುವೆಯಾದ ಕೇರಳದ ಯುವಕ ಆಕೆಗೆ ಎರಡು ಹೆಣ್ಮಕ್ಕಳನ್ನು ಕರುಣಿಸಿದ ಬಳಿಕ ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದಾನೆ.

ಫಾತಿಮಾ ತನ್ನ 9 ವರ್ಷ ಮತ್ತು 6 ವರ್ಷದ ಎರಡು ಮಕ್ಕಳೊಂದಿಗೆ ಉಳ್ಳಾಲದ ಒಂಭತ್ತುಕೆರೆಯಲ್ಲಿ ವಾಸವಾಗಿದ್ದಳು. ಈ ಸಮಯದಲ್ಲಿ ಉಳ್ಳಾಲದ SDPI ಅಧ್ಯಕ್ಷ ಸಿದ್ದೀಕ್ ಉಳ್ಳಾಲ, ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿದ್ದ. ಅಲ್ಲದೆ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಅಕ್ರಮ ಸಂಬಂಧಕ್ಕೆ ಮುಂದಾಗಿದ್ದ. ಆದರೆ, ಈ ನಡುವೆ ಆತ ಮಹಿಳೆಯ ಇಬ್ಬರು ಮಕ್ಕಳ ಮೇಲೆ ಕಣ್ಣು ಹಾಕಿದ್ದ. ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತ ಮಹಿಳೆ ಕಳೆದ ಜನವರಿ 16 ರಂದು ಉಳ್ಳಾಲ ಠಾಣೆಗೆ ದೂರು ನೀಡಿದ್ದಾಳೆ.
ಮಹಿಳೆಯ ಎರಡು ಹೆಣ್ಮಕ್ಕಳ ಮುಂದೆ ಸಿದ್ದೀಕ್ ಬೆತ್ತಲಾಗಿ ನಿಲ್ಲುತ್ತಿದ್ದನಂತೆ. ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದಳು. ಕಳೆದ ಡಿಸೆಂಬರ್ ತಿಂಗಳಲ್ಲೇ ಈ ಬೆಳವಣಿಗೆ ನಡೆದಿದ್ದು ಮಹಿಳೆಗೆ SDPI ಮುಖಂಡರು ಸೇರಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾಳೆ. ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ, ಇದೀಗ ಮತ್ತೆ ಸಿದ್ದೀಕನ ಕಾಮದಾಟ ಜಾಸ್ತಿ ಯಾಗುತ್ತಿಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸಿದ್ದೀಕ್ ಪರಾರಿಯಾಗಿದ್ದಾನೆ.
ಕಳೆದ ಶನಿವಾರ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇಂತಹ ಗಂಭೀರ ಪ್ರಕರಣದ ಬಗ್ಗೆ ಹಿರಿಯ ಪೊಲೀಸರು ಮಾತ್ರ ಟಿಕ್ ಪಿಟಿಕ್ ಎನ್ನುತ್ತಿಲ್ಲ. ಆರೋಪಿಯ ಬಂಧನಕ್ಕೂ ಮುಂದಾಗಿಲ್ಲ.
Love jihad and sexual assault to girl child Ullal police registered pocso act against SDPI leader
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm