ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am