ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am