ಬ್ರೇಕಿಂಗ್ ನ್ಯೂಸ್
19-01-21 06:09 pm Headline Karnataka News Network ಕ್ರೈಂ
ಅಹ್ಮದಾಬಾದ್, ಜ.19: ಪ್ರತಿಷ್ಠಿತ ಗೂಗಲ್ ಸಂಸ್ಥೆಯಲ್ಲಿ ಎಚ್ ಆರ್ ಮ್ಯಾನೇಜರ್ ಆಗಿದ್ದೇನೆಂದು ಹೇಳಿಕೊಂಡು ಯುವಕನೊಬ್ಬ 50ಕ್ಕೂ ಹೆಚ್ಚು ಮಂದಿಯನ್ನು ಮದುವೆಯಾಗುವುದಾಗಿ ನಂಬಿಸಿ, ಸಂಬಂಧ ಬೆಳೆಸಿಕೊಂಡಿದ್ದಲ್ಲದೆ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿರುವ ಘಟನೆ ಅಹ್ಮದಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ ಅಹ್ಮದಾಬಾದ್ ಸೈಬರ್ ಸೆಲ್ ಪೊಲೀಸರು ಸಂದೀಪ್ ಮಿಶ್ರಾ ಅಲಿಯಾಸ್ ವಿಹಾನ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ಅಹ್ಮದಾಬಾದ್ ಐಐಎಂನಲ್ಲಿ ಪದವೀಧರನಾಗಿದ್ದು, ಗೂಗಲ್ ಸಂಸ್ಥೆಯಲ್ಲಿ ಎಚ್ ಆರ್ ಮ್ಯಾನೇಜರ್ ಆಗಿದ್ದೇನೆಂದು ಹೇಳಿಕೊಂಡಿದ್ದಲ್ಲದೆ, ತನಗೆ ವಾರ್ಷಿಕ 40 ಲಕ್ಷ ಸಂಬಳ ಎಂದು ಪುಂಗಿ ಊದಿಕೊಂಡಿದ್ದ. ಮ್ಯಾಟ್ರಿಮೋನಿಯಲ್ ಸೈಟ್ ಗಳಲ್ಲಿ ಹೀಗೆ ಸುಳ್ಳು ಮಾಹಿತಿಗಳನ್ನು ಅಪ್ಲೋಡ್ ಮಾಡಿ, ಯುವತಿಯರನ್ನು ಗಾಳಕ್ಕೆ ಹಾಕುತ್ತಿದ್ದ. ಗಾಳಕ್ಕೆ ಬಿದ್ದ ಯುವತಿಯರ ಜೊತೆಗೆ ದೈಹಿಕ ಸಂಪರ್ಕ ಬೆಳೆಸುವುದಲ್ಲದೆ, ಅದರ ವಿಡಿಯೋ ದಾಖಲಿಸಿಕೊಂಡು ಬ್ಲಾಕ್ ಮೇಲ್ ಮಾಡಿ ಹಣ ಕೀಳುತ್ತಿದ್ದ. 50ಕ್ಕೂ ಹೆಚ್ಚು ಮಂದಿ ಯುವತಿಯರಿಗೆ ಹೀಗೆ ಮೋಸ ಮಾಡಿದ್ದಾನೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆರೋಪಿಯಿಂದ 30 ಸಿಮ್ ಕಾರ್ಡ್, ನಾಲ್ಕು ಮೊಬೈಲ್ ಫೋನ್, ನಾಲ್ಕು ನಕಲಿ ಐಡಿ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂದೀಪ್ ಮಿಶ್ರಾ ಬೇರೆ ಬೇರೆ ಹೆಸರುಗಳನ್ನು ಇಟ್ಟುಕೊಂಡು ಮೋಸ ಮಾಡಿದ್ದಾನೆ. ಆಕಾಶ್ ಶರ್ಮಾ, ವಿಹಾನ್ ಶರ್ಮಾ, ಪ್ರತೀಕ್ ಶರ್ಮಾ ಹೀಗೆ ಹಲವು ಹೆಸರುಗಳಲ್ಲಿ ಮ್ಯಾಟ್ರಿಮೋನಿಯಲ್ ಸೈಟ್ ಗಳಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದ. ಮೊದಲು ಯುವತಿಯರನ್ನು ಬಲೆಗೆ ಕೆಡಹುತ್ತಿದ್ದ ಆನಂತ್ರ ದೈಹಿಕ ಸಂಪರ್ಕ ಬೆಳೆಸಿ, ವಿಡಿಯೋ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಆತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ, ಆತನ ಮೊಬೈಲಿನಲ್ಲಿ ಹಲವಾರು ವಿಡಿಯೋಗಳು ಲಭ್ಯವಾಗಿವೆ.
ಐಐಎಂ ಅಹ್ಮದಾಬಾದ್ ನಲ್ಲಿ ಡಿಗ್ರಿ ಪಡೆದಿರುವ ಬಗ್ಗೆ ಆತ ನಕಲಿ ಸರ್ಟಿಫಿಕೇಟ್ ಅನ್ನೂ ಮಾಡಿಕೊಂಡಿದ್ದ. ಸಂದೀಪ್ ಶರ್ಮಾ ಹಲವು ರಾಜ್ಯಗಳ ಯುವತಿಯರನ್ನೂ ಟಾರ್ಗೆಟ್ ಮಾಡಿಕೊಂಡಿದ್ದ. ಈತನ ಬಲೆಗೆ ಬಿದ್ದವರಲ್ಲಿ ಅಹ್ಮದಾಬಾದ್, ಗೋವಾ, ಚತ್ತೀಸ್ ಗಢ, ಉಜ್ಜೈನ್, ಗ್ವಾಲಿಯರ್ ಹೀಗೆ ದೇಶದ ಹಲವು ನಗರಗಳ ಯುವತಿಯರನ್ನು ಬಲೆಗೆ ಕೆಡವಿದ್ದ ಎಂದು ಅಹ್ಮದಾಬಾದ್ ಸೈಬರ್ ಸೆಲ್ ಪೊಲೀಸರು ತಿಳಿಸಿದ್ದಾರೆ.
Hyderabad Man claimed to be a Google Employee has been booked for allegedly cheating Job aspirants by promising to secure them Jobs in Google.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm