ಬ್ರೇಕಿಂಗ್ ನ್ಯೂಸ್
19-01-21 06:09 pm Headline Karnataka News Network ಕ್ರೈಂ
ಅಹ್ಮದಾಬಾದ್, ಜ.19: ಪ್ರತಿಷ್ಠಿತ ಗೂಗಲ್ ಸಂಸ್ಥೆಯಲ್ಲಿ ಎಚ್ ಆರ್ ಮ್ಯಾನೇಜರ್ ಆಗಿದ್ದೇನೆಂದು ಹೇಳಿಕೊಂಡು ಯುವಕನೊಬ್ಬ 50ಕ್ಕೂ ಹೆಚ್ಚು ಮಂದಿಯನ್ನು ಮದುವೆಯಾಗುವುದಾಗಿ ನಂಬಿಸಿ, ಸಂಬಂಧ ಬೆಳೆಸಿಕೊಂಡಿದ್ದಲ್ಲದೆ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿರುವ ಘಟನೆ ಅಹ್ಮದಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ ಅಹ್ಮದಾಬಾದ್ ಸೈಬರ್ ಸೆಲ್ ಪೊಲೀಸರು ಸಂದೀಪ್ ಮಿಶ್ರಾ ಅಲಿಯಾಸ್ ವಿಹಾನ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ. ಪ್ರತಿಷ್ಠಿತ ಅಹ್ಮದಾಬಾದ್ ಐಐಎಂನಲ್ಲಿ ಪದವೀಧರನಾಗಿದ್ದು, ಗೂಗಲ್ ಸಂಸ್ಥೆಯಲ್ಲಿ ಎಚ್ ಆರ್ ಮ್ಯಾನೇಜರ್ ಆಗಿದ್ದೇನೆಂದು ಹೇಳಿಕೊಂಡಿದ್ದಲ್ಲದೆ, ತನಗೆ ವಾರ್ಷಿಕ 40 ಲಕ್ಷ ಸಂಬಳ ಎಂದು ಪುಂಗಿ ಊದಿಕೊಂಡಿದ್ದ. ಮ್ಯಾಟ್ರಿಮೋನಿಯಲ್ ಸೈಟ್ ಗಳಲ್ಲಿ ಹೀಗೆ ಸುಳ್ಳು ಮಾಹಿತಿಗಳನ್ನು ಅಪ್ಲೋಡ್ ಮಾಡಿ, ಯುವತಿಯರನ್ನು ಗಾಳಕ್ಕೆ ಹಾಕುತ್ತಿದ್ದ. ಗಾಳಕ್ಕೆ ಬಿದ್ದ ಯುವತಿಯರ ಜೊತೆಗೆ ದೈಹಿಕ ಸಂಪರ್ಕ ಬೆಳೆಸುವುದಲ್ಲದೆ, ಅದರ ವಿಡಿಯೋ ದಾಖಲಿಸಿಕೊಂಡು ಬ್ಲಾಕ್ ಮೇಲ್ ಮಾಡಿ ಹಣ ಕೀಳುತ್ತಿದ್ದ. 50ಕ್ಕೂ ಹೆಚ್ಚು ಮಂದಿ ಯುವತಿಯರಿಗೆ ಹೀಗೆ ಮೋಸ ಮಾಡಿದ್ದಾನೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆರೋಪಿಯಿಂದ 30 ಸಿಮ್ ಕಾರ್ಡ್, ನಾಲ್ಕು ಮೊಬೈಲ್ ಫೋನ್, ನಾಲ್ಕು ನಕಲಿ ಐಡಿ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂದೀಪ್ ಮಿಶ್ರಾ ಬೇರೆ ಬೇರೆ ಹೆಸರುಗಳನ್ನು ಇಟ್ಟುಕೊಂಡು ಮೋಸ ಮಾಡಿದ್ದಾನೆ. ಆಕಾಶ್ ಶರ್ಮಾ, ವಿಹಾನ್ ಶರ್ಮಾ, ಪ್ರತೀಕ್ ಶರ್ಮಾ ಹೀಗೆ ಹಲವು ಹೆಸರುಗಳಲ್ಲಿ ಮ್ಯಾಟ್ರಿಮೋನಿಯಲ್ ಸೈಟ್ ಗಳಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದ. ಮೊದಲು ಯುವತಿಯರನ್ನು ಬಲೆಗೆ ಕೆಡಹುತ್ತಿದ್ದ ಆನಂತ್ರ ದೈಹಿಕ ಸಂಪರ್ಕ ಬೆಳೆಸಿ, ವಿಡಿಯೋ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಆತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ, ಆತನ ಮೊಬೈಲಿನಲ್ಲಿ ಹಲವಾರು ವಿಡಿಯೋಗಳು ಲಭ್ಯವಾಗಿವೆ.
ಐಐಎಂ ಅಹ್ಮದಾಬಾದ್ ನಲ್ಲಿ ಡಿಗ್ರಿ ಪಡೆದಿರುವ ಬಗ್ಗೆ ಆತ ನಕಲಿ ಸರ್ಟಿಫಿಕೇಟ್ ಅನ್ನೂ ಮಾಡಿಕೊಂಡಿದ್ದ. ಸಂದೀಪ್ ಶರ್ಮಾ ಹಲವು ರಾಜ್ಯಗಳ ಯುವತಿಯರನ್ನೂ ಟಾರ್ಗೆಟ್ ಮಾಡಿಕೊಂಡಿದ್ದ. ಈತನ ಬಲೆಗೆ ಬಿದ್ದವರಲ್ಲಿ ಅಹ್ಮದಾಬಾದ್, ಗೋವಾ, ಚತ್ತೀಸ್ ಗಢ, ಉಜ್ಜೈನ್, ಗ್ವಾಲಿಯರ್ ಹೀಗೆ ದೇಶದ ಹಲವು ನಗರಗಳ ಯುವತಿಯರನ್ನು ಬಲೆಗೆ ಕೆಡವಿದ್ದ ಎಂದು ಅಹ್ಮದಾಬಾದ್ ಸೈಬರ್ ಸೆಲ್ ಪೊಲೀಸರು ತಿಳಿಸಿದ್ದಾರೆ.
Hyderabad Man claimed to be a Google Employee has been booked for allegedly cheating Job aspirants by promising to secure them Jobs in Google.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm