ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm