ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am