ಬ್ರೇಕಿಂಗ್ ನ್ಯೂಸ್
26-01-21 01:29 pm Bangalore Correspondent ಕ್ರೈಂ
ಬೆಂಗಳೂರು, ಜ.26: ಕೆಪಿಎಸ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ರೂವಾರಿಯಾಗಿದ್ದ ಸ್ಟೆನೋಗ್ರಾಫರ್ ಸನಾ ಬೇಡಿ ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 16ಕ್ಕೇರಿದೆ.
ಕೆಲ ವರ್ಷಗಳಿಂದ ಕೆಪಿಎಸ್ಸಿ ಪರೀಕ್ಷಾ ವಿಭಾಗದಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸನಾ ಬೇಡಿ, ಜ.24ರಂದು ಭಾನುವಾರ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಟೈಪ್ ಮಾಡಿದ್ದಳು. ಅಲ್ಲದೆ, ಅದನ್ನು ಪ್ರಮುಖ ಆರೋಪಿ ರಮೇಶ್ ಅಲಿಯಾಸ್ ರಾಮಪ್ಪ ಹರೇಕಲ್ ಗೆ ಪೆನ್ ಡ್ರೈವ್ ಮೂಲಕ ಕೊಟ್ಟಿದ್ದಳು. ರಮೇಶ್ ಹಣದ ಆಮಿಷಕ್ಕೊಳಗಾಗಿ ತನ್ನ ಪರಿಚಿತ ಚಂದ್ರು ಮೂಲಕ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎನ್ನುವ ಅಂಶ ವಿಚಾರಣೆಯಲ್ಲಿ ಬಯಲಾಗಿದೆ.
ಕೆಪಿಎಸ್ಸಿ ವಿಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಮೇಶ್, ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸನಾ ಬೇಡಿ ಟೈಪ್ ಮಾಡುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ ಸನಾ ಬೇಡಿಯನ್ನು ಕಾಡತೊಡಗಿದ್ದ ರಮೇಶ್, ಈ ಬಾರಿ ಎಫ್ ಡಿಎ ಪರೀಕ್ಷೆ ಬರೆದು ಪಾಸಾಗಬೇಕು ಎಂದು ನಾಟಕವಾಡಿದ್ದ. ಅಲ್ಲದೆ, ಪ್ರಶ್ನೆ ಪತ್ರಿಕೆಯ ಪ್ರತಿ ನೀಡುವಂತೆ ಪೀಡಿಸಿದ್ದಾನೆ. ಬಳಿಕ ಸನಾ ಬೇಡಿ ತನ್ನಲ್ಲಿ ಕಾಪಿ ಮಾಡಿ ಇಟ್ಟುಕೊಂಡಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ಪೆನ್ ಡ್ರೈವ್ ನಲ್ಲಿ ಹಾಕಿ ಕೊಟ್ಟಿದ್ದಳು. ಅದಕ್ಕಾಗಿ ಎಷ್ಟು ಹಣ ಪಡೆದಿದ್ದಾಳೆ ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಲ್ಲವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ.
ಇದೇ ವೇಳೆ, ಪ್ರಶ್ನೆಪತ್ರಿಕೆಯನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಅಭ್ಯರ್ಥಿಗಳಿಂದ ಡೀಲ್ ಕುದುರಿಸಿದ್ದ ಚಂದ್ರ ಮತ್ತು ರಾಜಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಈವರೆಗೆ 82 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣ ಕೊಟ್ಟು ಪ್ರಶ್ನೆ ಪತ್ರಿಕೆ ಖರೀದಿಸಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನೂ ಬಂಧಿಸಿದ್ದಾರೆ.
Continuing its investigations into the FDA question paper leak case, the Central Crime Branch (CCB) today arrested Sana Bedi, stenographer in the Karnataka Public Service Commission (KPSC) controller of exam division, who allegedly played a key role in getting the papers leaked.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am