ಬ್ರೇಕಿಂಗ್ ನ್ಯೂಸ್
26-01-21 01:29 pm Bangalore Correspondent ಕ್ರೈಂ
ಬೆಂಗಳೂರು, ಜ.26: ಕೆಪಿಎಸ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ರೂವಾರಿಯಾಗಿದ್ದ ಸ್ಟೆನೋಗ್ರಾಫರ್ ಸನಾ ಬೇಡಿ ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 16ಕ್ಕೇರಿದೆ.
ಕೆಲ ವರ್ಷಗಳಿಂದ ಕೆಪಿಎಸ್ಸಿ ಪರೀಕ್ಷಾ ವಿಭಾಗದಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸನಾ ಬೇಡಿ, ಜ.24ರಂದು ಭಾನುವಾರ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಟೈಪ್ ಮಾಡಿದ್ದಳು. ಅಲ್ಲದೆ, ಅದನ್ನು ಪ್ರಮುಖ ಆರೋಪಿ ರಮೇಶ್ ಅಲಿಯಾಸ್ ರಾಮಪ್ಪ ಹರೇಕಲ್ ಗೆ ಪೆನ್ ಡ್ರೈವ್ ಮೂಲಕ ಕೊಟ್ಟಿದ್ದಳು. ರಮೇಶ್ ಹಣದ ಆಮಿಷಕ್ಕೊಳಗಾಗಿ ತನ್ನ ಪರಿಚಿತ ಚಂದ್ರು ಮೂಲಕ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎನ್ನುವ ಅಂಶ ವಿಚಾರಣೆಯಲ್ಲಿ ಬಯಲಾಗಿದೆ.
ಕೆಪಿಎಸ್ಸಿ ವಿಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಮೇಶ್, ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸನಾ ಬೇಡಿ ಟೈಪ್ ಮಾಡುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ ಸನಾ ಬೇಡಿಯನ್ನು ಕಾಡತೊಡಗಿದ್ದ ರಮೇಶ್, ಈ ಬಾರಿ ಎಫ್ ಡಿಎ ಪರೀಕ್ಷೆ ಬರೆದು ಪಾಸಾಗಬೇಕು ಎಂದು ನಾಟಕವಾಡಿದ್ದ. ಅಲ್ಲದೆ, ಪ್ರಶ್ನೆ ಪತ್ರಿಕೆಯ ಪ್ರತಿ ನೀಡುವಂತೆ ಪೀಡಿಸಿದ್ದಾನೆ. ಬಳಿಕ ಸನಾ ಬೇಡಿ ತನ್ನಲ್ಲಿ ಕಾಪಿ ಮಾಡಿ ಇಟ್ಟುಕೊಂಡಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ಪೆನ್ ಡ್ರೈವ್ ನಲ್ಲಿ ಹಾಕಿ ಕೊಟ್ಟಿದ್ದಳು. ಅದಕ್ಕಾಗಿ ಎಷ್ಟು ಹಣ ಪಡೆದಿದ್ದಾಳೆ ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಲ್ಲವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ.
ಇದೇ ವೇಳೆ, ಪ್ರಶ್ನೆಪತ್ರಿಕೆಯನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಅಭ್ಯರ್ಥಿಗಳಿಂದ ಡೀಲ್ ಕುದುರಿಸಿದ್ದ ಚಂದ್ರ ಮತ್ತು ರಾಜಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಈವರೆಗೆ 82 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣ ಕೊಟ್ಟು ಪ್ರಶ್ನೆ ಪತ್ರಿಕೆ ಖರೀದಿಸಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನೂ ಬಂಧಿಸಿದ್ದಾರೆ.
Continuing its investigations into the FDA question paper leak case, the Central Crime Branch (CCB) today arrested Sana Bedi, stenographer in the Karnataka Public Service Commission (KPSC) controller of exam division, who allegedly played a key role in getting the papers leaked.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm