ಬ್ರೇಕಿಂಗ್ ನ್ಯೂಸ್
26-01-21 01:29 pm Bangalore Correspondent ಕ್ರೈಂ
ಬೆಂಗಳೂರು, ಜ.26: ಕೆಪಿಎಸ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ರೂವಾರಿಯಾಗಿದ್ದ ಸ್ಟೆನೋಗ್ರಾಫರ್ ಸನಾ ಬೇಡಿ ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 16ಕ್ಕೇರಿದೆ.
ಕೆಲ ವರ್ಷಗಳಿಂದ ಕೆಪಿಎಸ್ಸಿ ಪರೀಕ್ಷಾ ವಿಭಾಗದಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸನಾ ಬೇಡಿ, ಜ.24ರಂದು ಭಾನುವಾರ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಟೈಪ್ ಮಾಡಿದ್ದಳು. ಅಲ್ಲದೆ, ಅದನ್ನು ಪ್ರಮುಖ ಆರೋಪಿ ರಮೇಶ್ ಅಲಿಯಾಸ್ ರಾಮಪ್ಪ ಹರೇಕಲ್ ಗೆ ಪೆನ್ ಡ್ರೈವ್ ಮೂಲಕ ಕೊಟ್ಟಿದ್ದಳು. ರಮೇಶ್ ಹಣದ ಆಮಿಷಕ್ಕೊಳಗಾಗಿ ತನ್ನ ಪರಿಚಿತ ಚಂದ್ರು ಮೂಲಕ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎನ್ನುವ ಅಂಶ ವಿಚಾರಣೆಯಲ್ಲಿ ಬಯಲಾಗಿದೆ.
ಕೆಪಿಎಸ್ಸಿ ವಿಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಮೇಶ್, ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸನಾ ಬೇಡಿ ಟೈಪ್ ಮಾಡುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ ಸನಾ ಬೇಡಿಯನ್ನು ಕಾಡತೊಡಗಿದ್ದ ರಮೇಶ್, ಈ ಬಾರಿ ಎಫ್ ಡಿಎ ಪರೀಕ್ಷೆ ಬರೆದು ಪಾಸಾಗಬೇಕು ಎಂದು ನಾಟಕವಾಡಿದ್ದ. ಅಲ್ಲದೆ, ಪ್ರಶ್ನೆ ಪತ್ರಿಕೆಯ ಪ್ರತಿ ನೀಡುವಂತೆ ಪೀಡಿಸಿದ್ದಾನೆ. ಬಳಿಕ ಸನಾ ಬೇಡಿ ತನ್ನಲ್ಲಿ ಕಾಪಿ ಮಾಡಿ ಇಟ್ಟುಕೊಂಡಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ಪೆನ್ ಡ್ರೈವ್ ನಲ್ಲಿ ಹಾಕಿ ಕೊಟ್ಟಿದ್ದಳು. ಅದಕ್ಕಾಗಿ ಎಷ್ಟು ಹಣ ಪಡೆದಿದ್ದಾಳೆ ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಲ್ಲವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ.
ಇದೇ ವೇಳೆ, ಪ್ರಶ್ನೆಪತ್ರಿಕೆಯನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಅಭ್ಯರ್ಥಿಗಳಿಂದ ಡೀಲ್ ಕುದುರಿಸಿದ್ದ ಚಂದ್ರ ಮತ್ತು ರಾಜಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಈವರೆಗೆ 82 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣ ಕೊಟ್ಟು ಪ್ರಶ್ನೆ ಪತ್ರಿಕೆ ಖರೀದಿಸಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನೂ ಬಂಧಿಸಿದ್ದಾರೆ.
Continuing its investigations into the FDA question paper leak case, the Central Crime Branch (CCB) today arrested Sana Bedi, stenographer in the Karnataka Public Service Commission (KPSC) controller of exam division, who allegedly played a key role in getting the papers leaked.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm