ಬ್ರೇಕಿಂಗ್ ನ್ಯೂಸ್
27-01-21 12:01 pm Udupi Correspondent ಕ್ರೈಂ
ಉಡುಪಿ, ಜ.27 : ಬೈಕಿನಲ್ಲಿ ತೆರಳುತ್ತಿದ್ದ ತಾಯಿ - ಮಗನನ್ನು ಕೋಟ ಠಾಣೆ ಪೊಲೀಸರು ತಪಾಸಣೆ ನೆಪದಲ್ಲಿ ಥಳಿಸಿ ಅಮಾನವೀಯ ನಡೆ ತೋರಿದ ಘಟನೆ ಕೋಟದಲ್ಲಿ ನಡೆದಿದೆ.
ಪ್ರಶಾಂತ್ ಎಂಬವರು, ಕೋಟ ಮೂರುಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚೆಕ್ಕಿಂಗ್ ನೆಪದಲ್ಲಿ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಅವರು ಪ್ರಶಾಂತ್ ಬೈಕ್ ತಡೆದು ದಾಖಲೆ ಕೇಳಿದ್ದಾರೆ. ಒರಿಜಿನಲ್ ದಾಖಲೆ ಮನೆಯಲ್ಲಿದ್ದ ಕಾರಣ ವಾಹನದ ದಾಖಲೆಯ ಝೆರಾಕ್ಸ್ ಅನ್ನು ಪ್ರಶಾಂತ್ ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೊಲೀಸರು ಪ್ರಶಾಂತ್ ಗೆ ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಪಕ್ಕೆ ಪ್ರಶಾಂತ್ ಮೇಲೆ ಕೋಟ ಎಸ್ಸೈ ಕೈ ಮಾಡಿದ್ದು ಇಬ್ಬರು ಪೊಲೀಸರು ಸೇರಿ ಹಲ್ಲೆಗೈದು ಥಳಿಸಿದ್ದಾರೆ. ಇದನ್ನು ತಡೆಯಲು ಬಂದ ಪ್ರಶಾಂತ್ ತಾಯಿ ಶಾರದಾ ಅವರಿಗೂ ಬೆತ್ತದಿಂದ ಪೆಟ್ಟು ನೀಡಿದ್ದು ಮಗನನ್ನು ಅರೆಸ್ಟ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದಾರೆ. ಇತ್ತ ಪೊಲೀಸ್ ರಿಂದ ಥಳಿಸಿಕೊಂಡ ಶಾರದಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ , ಇದೇ ವಿಚಾರವಾಗಿ ತಾಯಿ ಶಾರದಾ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಥಳಿಸುವ, ಹಲ್ಲೆ ಮಾಡುವ ಅಗತ್ಯ ಇಲ್ಲದಿದ್ದರೂ ನನ್ನ ಮತ್ತು ಮಗನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕೇಸು ದಾಖಲಿಸಬೇಕು, ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ಕೃತ್ಯ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Son and Mother have been brutally assaulted by Kota Police overheated arguments in the matter of Vehicle Inspection in Udupi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm