ಬ್ರೇಕಿಂಗ್ ನ್ಯೂಸ್
27-01-21 12:01 pm Udupi Correspondent ಕ್ರೈಂ
ಉಡುಪಿ, ಜ.27 : ಬೈಕಿನಲ್ಲಿ ತೆರಳುತ್ತಿದ್ದ ತಾಯಿ - ಮಗನನ್ನು ಕೋಟ ಠಾಣೆ ಪೊಲೀಸರು ತಪಾಸಣೆ ನೆಪದಲ್ಲಿ ಥಳಿಸಿ ಅಮಾನವೀಯ ನಡೆ ತೋರಿದ ಘಟನೆ ಕೋಟದಲ್ಲಿ ನಡೆದಿದೆ.
ಪ್ರಶಾಂತ್ ಎಂಬವರು, ಕೋಟ ಮೂರುಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚೆಕ್ಕಿಂಗ್ ನೆಪದಲ್ಲಿ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಅವರು ಪ್ರಶಾಂತ್ ಬೈಕ್ ತಡೆದು ದಾಖಲೆ ಕೇಳಿದ್ದಾರೆ. ಒರಿಜಿನಲ್ ದಾಖಲೆ ಮನೆಯಲ್ಲಿದ್ದ ಕಾರಣ ವಾಹನದ ದಾಖಲೆಯ ಝೆರಾಕ್ಸ್ ಅನ್ನು ಪ್ರಶಾಂತ್ ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೊಲೀಸರು ಪ್ರಶಾಂತ್ ಗೆ ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಪಕ್ಕೆ ಪ್ರಶಾಂತ್ ಮೇಲೆ ಕೋಟ ಎಸ್ಸೈ ಕೈ ಮಾಡಿದ್ದು ಇಬ್ಬರು ಪೊಲೀಸರು ಸೇರಿ ಹಲ್ಲೆಗೈದು ಥಳಿಸಿದ್ದಾರೆ. ಇದನ್ನು ತಡೆಯಲು ಬಂದ ಪ್ರಶಾಂತ್ ತಾಯಿ ಶಾರದಾ ಅವರಿಗೂ ಬೆತ್ತದಿಂದ ಪೆಟ್ಟು ನೀಡಿದ್ದು ಮಗನನ್ನು ಅರೆಸ್ಟ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದಾರೆ. ಇತ್ತ ಪೊಲೀಸ್ ರಿಂದ ಥಳಿಸಿಕೊಂಡ ಶಾರದಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ , ಇದೇ ವಿಚಾರವಾಗಿ ತಾಯಿ ಶಾರದಾ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಥಳಿಸುವ, ಹಲ್ಲೆ ಮಾಡುವ ಅಗತ್ಯ ಇಲ್ಲದಿದ್ದರೂ ನನ್ನ ಮತ್ತು ಮಗನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕೇಸು ದಾಖಲಿಸಬೇಕು, ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ಕೃತ್ಯ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Son and Mother have been brutally assaulted by Kota Police overheated arguments in the matter of Vehicle Inspection in Udupi.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am