ಬ್ರೇಕಿಂಗ್ ನ್ಯೂಸ್
27-01-21 02:21 pm Udupi Correspondent ಕ್ರೈಂ
ಉಡುಪಿ, ಜ.27: ಬೈಕಿನಲ್ಲಿ ಬಂದ ಮೂರು ಮಂದಿ ಯುವಕರು ಒಂಟಿ ಮಹಿಳೆಯರಿದ್ದ ಮನೆಗಳಿಂದ ಕಳವು ಮಾಡಲು ಹೊಂಚು ಹಾಕುತ್ತಿರುವುದನ್ನು ತಿಳಿದ ಗ್ರಾಮಸ್ಥರು ಅವರನ್ನು ಹಿಡಿದು ಕೂಡಿಹಾಕಿದ ಘಟನೆ ಬ್ರಹ್ಮಾವರ ಬಳಿಯ ಶಿರಿಯಾರದಲ್ಲಿ ನಡೆದಿದೆ.
ಶಿರಿಯಾರದ ಗುಡ್ಡಟ್ಟು ಎಂಬಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಇಬ್ಬರನ್ನು ಹಿಡಿದು ಬ್ರಹ್ಮಾವರ ಪೊಲೀಸರಿಗೆ ಒಪ್ಪಿಸಿದ್ದಾರೆ. ಸುರೇಶ್ ಮತ್ತು ಬೆಂಗಳೂರು ಮೂಲದ ರಾಕೇಶ್ ಬಂಧಿತರು. ಇನ್ನೊಬ್ಬ ನಂದೀಶ್ ಅಲಿಯಾಸ್ ವಿಶ್ವ ಎಂಬಾತ ಓಡಿ ತಪ್ಪಿಸಿಕೊಂಡಿದ್ದಾನೆ.
ಒಂಟಿ ಮಹಿಳೆಯರು ವಾಸವಿದ್ದ ಮನೆಗಳಿಗೆ ಬರುತ್ತಿದ್ದ ಯುವಕರು ಅಲ್ಲಿಂದ ವಸ್ತುಗಳನ್ನು ಕದಿಯಲು ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪ್ರಶ್ನೆ ಮಾಡಿದ್ದಲ್ಲದೆ, ಹಿಡಿಯಲು ಯತ್ನಿಸಿದಾಗ ಚೂರಿ ತೋರಿಸಿ ಬೆದರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಬ್ರಹ್ಮಾವರ ಠಾಣೆಗೆ ಮಾಹಿತಿ ನೀಡಿದ್ದು, ಅಲ್ಲದೆ ಸ್ಥಳೀಯ ಯುವಕರು ಒಟ್ಟಾಗಿ ಯುವಕರ ಪತ್ತೆಗೆ ಮುಂದಾಗಿದ್ದಾರೆ. ಕೊನೆಗೆ ಸ್ಥಳೀಯರು ಮತ್ತು ಪೊಲೀಸರು ಬೆನ್ನಟ್ಟಿ ಜಪ್ತಿ ಎನ್ನುವ ಗ್ರಾಮದಲ್ಲಿ ಇಬ್ಬರನ್ನು ಹಿಡಿದಿದ್ದಾರೆ. ನಂದೀಶ್ ಓಡಿ ತಪ್ಪಿಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದೇ ವೇಳೆ, ಯುವಕರು ಸಣ್ಣ ಮಕ್ಕಳನ್ನು ಹಿಡಿಯಲು ಯತ್ನಿಸುತ್ತಿದ್ದರು ಎನ್ನುವ ವದಂತಿಯೂ ಹಬ್ಬಿದೆ. ಆದರೆ, ಪೊಲೀಸರು ಅದನ್ನು ನಿರಾಕರಿಸಿದ್ದಾರೆ. ಆರು ವರ್ಷದ ಮಗುವಿನ ಜೊತೆಗೆ ಯುವಕರು ಮಾತನಾಡುತ್ತಿದ್ದರು. ಮಗುವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಸ್ಥಳೀಯರು ಸೇರಿದ್ದು ಯುವಕರು ಅಲ್ಲಿಂದ ಕಾಲ್ಕಿತ್ತಿದ್ದರು. ಬಳಿಕ ಸ್ಥಳೀಯರು ಆಟೋದಲ್ಲಿ ಬೆನ್ನಟ್ಟಿದ್ದು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು ಎನ್ನಲಾಗುತ್ತಿದೆ.
ಘಟನೆ ಬಗ್ಗೆ ಯಾರು ಕೂಡ ಪೊಲೀಸರಿಗೆ ದೂರು ದಾಖಲು ಮಾಡಿಲ್ಲ. ಆದರೂ, ಪೊಲೀಸರು ತನಿಖೆ ನಡೆಸುತ್ತಿದ್ದು, ವಶಕ್ಕೆ ಪಡೆದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆಗೆ ಹಸ್ತಾಂತರಿಸಲು ಯೋಜನೆ ಹಾಕಿದ್ದಾರೆ. ಉರ್ವಾ ಠಾಣೆ ವ್ಯಾಪ್ತಿಯಲ್ಲಿ ಮೂವರು ಯುವಕರು ಬೈಕಿನಲ್ಲಿ ಬಂದು ಕಳವು ಕೃತ್ಯದಲ್ಲಿ ಭಾಗಿಯಾದ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಬಂಧಿತರ ಪೈಕಿ ಸುರೇಶ್ ಸ್ಥಳೀಯನಾಗಿದ್ದು, ಉಳಿಬ್ಬರು ಬೆಂಗಳೂರು ಮೂಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದೆ.
Three young men who arrived in a motorbike reportedly tried to steal items from a few houses located at Brahmavar, Guddattu, near Shiriyara in the taluk in Udupi where held by Pulic on Tuesday January 26.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am