ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.

ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm