ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.

ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm