ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.
ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm