ಬ್ರೇಕಿಂಗ್ ನ್ಯೂಸ್
28-01-21 10:53 am Mangalore Correspondent ಕ್ರೈಂ
ಉಪ್ಪಿನಂಗಡಿ, ಜ.28 : ಗ್ರಾಹಕನಂತೆ ನಟಿಸಿ ಸಹಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಕೇರಳ ನೋಂದಣಿಯ ಕಾರಿನಲ್ಲಿ ಆಗಮಿಸಿದ್ದ ಆರೋಪಿ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿರಿಸಿ ಹಣ ಸಾಲ ಪಡೆದಿದ್ದ. ಬಿಝಿಯಾಗಿದ್ದ ಆತ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು ನೈಜ ಚಿನ್ನಾಭರಣ ಎಂದೇ ಭಾವಿಸಿ ಅದನ್ನು ಪರಿಶೀಲಿಸುವ ಮೊದಲೇ ಸಿಬಂದಿ ಹಣ ನೀಡಿದ್ದರು. ಆತ ನೀಡಿದ ಆಭರಣ ಅಸಲಿ ಅಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದ್ದು ಅಷ್ಟರಲ್ಲಿ ಆರೋಪಿ ಹಣ ಒಯ್ದಾಗಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ಒಂದೇ ದಿನ ಇದೇ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಎರಡು ಸಹಕಾರಿ ಸಂಸ್ಥೆಗಳಿಗೆ ನಕಲಿ ಚಿನ್ನವಿಟ್ಟು ವಂಚಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm