ಬ್ರೇಕಿಂಗ್ ನ್ಯೂಸ್
30-01-21 12:40 pm Udupi Correspondent ಕ್ರೈಂ
ಕುಂದಾಪುರ, ಜ.30: ಆರು ವರ್ಷಗಳ ಹಿಂದೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಬಳಿಕ ಮದುವೆ ನಿರಾಕರಿಸಿದ ಆರೋಪಿಗೆ ಕುಂದಾಪುರದಲ್ಲಿರುವ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.
ಅರ್ಡಿ ಸಮೀಪದ ಕೊಂಜಾಡಿ ನಿವಾಸಿ ಪ್ರದೀಪ್ ನಾಯ್ಕ್ (36) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2005ರಲ್ಲಿ ಹೊಸ ಮನೆಯ ಗಾರೆ ಕೆಲಸಕ್ಕೆಂದು ಬಂದಿದ್ದ ಪ್ರದೀಪ್, ಅಲ್ಲಿನ ಯುವತಿಯೊಂದಿಗೆ ಸ್ನೇಹ ಬೆಳಸಿದ್ದನು. ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದನು. ಮುಂದೆ ಮದುವೆಗೆ ನಿರಾಕರಿಸಿ ವಂಚಿಸಿದ್ದು ಯುವತಿ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿ ಹಾಗೂ ಆಕೆ ತಂದೆ-ತಾಯಿ ಸೇರಿ ಒಟ್ಟು 9 ಮಂದಿ ನ್ಯಾಯಾಲಯದಲ್ಲಿ ಸಾಕ್ಷಿ ನುಡಿದಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶ ನರಹರಿ ಪ್ರಭಾಕರ್ ಮರಾಠೆ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.
ಅದರಂತೆ ಅತ್ಯಾಚಾರ ಪ್ರಕರಣ ಐಪಿಸಿ ಕಲಂ 376ಗೆ 10 ವರ್ಷ ಕಠಿಣ ಜೈಲು ಮತ್ತು 50 ಸಾವಿರ ದಂಡ, ಮನೆಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ ಐಪಿಸಿ ಸೆಕ್ಷನ್ 448 ಹಾಗೂ ಮೋಸ (ಐಪಿಸಿ ಕಲಂ 417) ಕ್ಕೆ ತಲಾ 1 ವರ್ಷ ಸಜೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದಲ್ಲಿ 50 ಸಾವಿರ ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.
Kundapur district and additional sessions Justice Narahari Prabhakar Marate has announced the quantum of punishment for the accused who had raped a girl for several years by making false promises of marriage.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm