ಬ್ರೇಕಿಂಗ್ ನ್ಯೂಸ್
01-02-21 03:00 pm Mangalore Correspondent ಕ್ರೈಂ
ಮಂಗಳೂರು, ಫೆ.1: ಒಂದೂವರೆ ವರ್ಷಗಳಿಂದ ಪ್ರೀತಿಸಿ ಕೈಕೊಟ್ಟಿದ್ದ ಯುವತಿಯನ್ನು ಚೂರಿ ಇರಿದು ಹತ್ಯೆಗೈಯಲು ಮುಂದಾದ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಜೊತೆ ಬೋಳೂರಿನ ತ್ರಿಶೂಲ್ ಸಾಲ್ಯಾನ್ (21) ಎಂಬಾತ ಸಂಪರ್ಕದಲ್ಲಿದ್ದು ಇತ್ತೀಚೆಗೆ ಇವರ ಸಂಬಂಧ ಹಳಸಿತ್ತು. ಹಾಗಾಗಿ, 18 ವರ್ಷದ ಯುವತಿ ನಿನ್ನ ಜೊತೆ ಸಂಬಂಧವೇ ಬೇಡ ಎಂದಿದ್ದಳು. ಅಲ್ಲದೆ, ನೀನು ಕೊಟ್ಟಿದ್ದ ರಿಂಗ್ ಸೇರಿ ಎಲ್ಲ ಗಿಫ್ಟ್ ಗಳನ್ನೂ ಹಿಂತಿರುಗಿಸುತ್ತೇನೆ ಎಂದು ಮೊನ್ನೆ ಜ.30ರಂದು ಬಂಟ್ಸ್ ಹಾಸ್ಟೆಲಿಗೆ ಬಂದಿದ್ದಳು. ಇದರಿಂದ ಕಂಗೆಟ್ಟಿದ್ದ ಯುವಕ ತ್ರಿಶೂಲ್, ಅಲ್ಲಿಯೇ ಹಲ್ಲೆ ಮಾಡಲು ಮುಂದಾಗಿದ್ದ.

ಅದೇ ದಿನ ಸಂಜೆ ಯುವತಿ ತನ್ನ ಸ್ನೇಹಿತೆಯ ಹುಟ್ಟುಹಬ್ಬಕ್ಕೆಂದು ಬೆಂದೂರ್ ವೆಲ್ ನಲ್ಲಿರುವ ಕುಮಾರ್ ಇಂಡರ್ನ್ಯಾಶನಲ್ ಹೊಟೇಲಿಗೆ ತೆರಳಿದ್ದಳು. ಅಲ್ಲಿ ಇತರು ಯುವತಿಯರು ಮತ್ತು ಯುವಕರ ಜೊತೆ ಪಾರ್ಟಿ ನಡೆಸುತ್ತಿರುವ ವಿಚಾರ ತಿಳಿದ ತ್ರಿಶೂಲ್, ತನ್ನ ಇತರ ಸಂಗಡಿಗರನ್ನು ಕರೆದೊಯ್ದು ಅಲ್ಲಿ ಆಕೆಯನ್ನು ಕೊಲ್ಲಲು ಮುಂದಾಗಿದ್ದಾನೆ. ಚೂರಿಯಿಂದ ಇರಿಯಲು ಮುಂದಾಗಿದ್ದು, ಹುಡುಗಿ ಅಲ್ಲಿ ತಪ್ಪಿಸಿಕೊಂಡಿದ್ದಾಳೆ. ಅಡ್ಡ ಬಂದಿದ್ದ ಯುವಕ ಪ್ರತೀಕ್ಷ್ ಎಂಬಾತನಿಗೆ ನಾಲ್ಕು ಕಡೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ.

ತ್ರಿಶೂಲ್ ಮತ್ತು ಇತರ ಇಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಚಹರೆ ಆಧರಿಸಿ ಮೂವರನ್ನು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿ ಸಂತೋಷ್ ಪೂಜಾರಿ(19) ಮತ್ತು ಅಶೋಕ ನಗರ ನಿವಾಸಿ ಡ್ಯಾನಿಶ್ (18) ಇತರ ಇಬ್ಬರು ಬಂಧಿತರು. ಯುವತಿಯ ಹೆತ್ತವರು ಕೆನಡಾದಲ್ಲಿದ್ದು, ಪುತ್ತೂರಿನ ಅಜ್ಜಿ ಮನೆಯಲ್ಲಿದ್ದುಕೊಂಡು ಮಂಗಳೂರಿನಲ್ಲಿ ಕಲಿಯುತ್ತಿದ್ದಳು. ಈಕೆಗೆ ಇನ್ ಸ್ಟಾ ಗ್ರಾಮಿನಲ್ಲಿ ತ್ರಿಶೂಲ್ ಪರಿಚಯ ಆಗಿತ್ತು ಎಂದು ಪ್ರಕರಣದ ಬಗ್ಗೆ ವಿವರ ನೀಡಿದ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ತ್ರಿಶೂಲ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಬಂದರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಉರ್ವಾ ಠಾಣೆಯಲ್ಲೂ ಕೇಸು ಇದೆ. ಪ್ರತೀಕ್ಷ್ ಕೂಡ, ಯುವತಿಗೆ ಇನ್ ಸ್ಟಾ ಗ್ರಾಮಿನಲ್ಲಿ ಪರಿಚಯ ಆಗಿದ್ದ. ಇನ್ನೊಬ್ಬ ಸ್ನೇಹಿತೆಯೂ ಇನ್ ಸ್ಟಾ ಗ್ರಾಮಿನಲ್ಲಿ ಪರಿಚಯ ಆಗಿದ್ದು ಹುಟ್ಟುಹಬ್ಬಕ್ಕೆ ಕರೆದಿದ್ದಳು. ಪಾರ್ಟಿ ನಡೆಸುತ್ತಿದ್ದಾಗಲೇ ಆರೋಪಿ ತ್ರಿಶೂಲ್ ತಂಡ ಕಟ್ಟಿಕೊಂಡು ಬಂದು ಕೃತ್ಯ ನಡೆಸಿದ್ದಾನೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read: ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ರೌಡಿಯಿಂದ ಹಲ್ಲೆ ; ಹೊಟೇಲ್ ನುಗ್ಗಿ ಕೃತ್ಯ ಸಿಸಿಟಿವಿಯಲ್ಲಿ ಸೆರೆ !
Video:
Boy stabs Ex-girlfriend with his friends and also attacks her friends who were in a party at a local restaurant in Mangalore. The police have arrested three youths in connection to this case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am