ಬ್ರೇಕಿಂಗ್ ನ್ಯೂಸ್
02-02-21 05:26 pm Headline Karnataka News Network ಕ್ರೈಂ
ಬೆಂಗಳೂರು, ಫೆ.2: ಖ್ಯಾತ ಟಿವಿ ಜ್ಯೋತಿಷಿ ಆನಂದ ಗುರೂಜಿಯನ್ನು ವಿಡಿಯೋ ತುಣುಕು ಮುಂದಿಟ್ಟು ಪತ್ರಕರ್ತರ ಸೋಗಿನಲ್ಲಿ ಬ್ಲ್ಕಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಆನಂದ ಗುರೂಜಿ ಆಪ್ತ ಬಿ.ಆರ್.ನಾಗರಾಜ್ ನೀಡಿದ್ದ ದೂರಿನಂತೆ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತು ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಎಂಬ ಮೂವರ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ ಸೂರ್ಯ ಎನ್ನುವ ಪತ್ರಿಕೆಯ ಸಂಪಾದಕ ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಮತ್ತು ಯುವ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎ.ಸಿ.ವೆಂಕಟೇಶ್ ಎಂಬವರು ಕಾಂಗ್ರೆಸ್ ಮುಖಂಡ ಸುಧೀಂದ್ರ ಹಾಗೂ ಆನಂದ ಗುರೂಜಿ ಕುಟುಂಬದ ವೈಯಕ್ತಿಕ ವಿವರಗಳನ್ನು ಕಲೆಹಾಕಿದ್ದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸುವುದಾಗಿ ಹೇಳಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಸುದ್ದಿಯನ್ನು ಹಾಕದಿರಲು 50 ಲಕ್ಷ ರೂ. ನೀಡುವಂತೆ ಬೆದರಿಸಿದ್ದರು.

ಬೆದರಿಕೆಯ ಬಗ್ಗೆ ಸುಧೀಂದ್ರ ನಿರ್ಲಕ್ಷ್ಯ ಮಾಡಿದ್ದರು. ಆದರೆ, ಇಷ್ಟಕ್ಕೇ ಸುಮ್ಮನಾಗದ ಆರೋಪಿಗಳು ಸುಧೀಂದ್ರ ಮತ್ತು ಆನಂದ ಗುರೂಜಿ ಬಗ್ಗೆ ಕೆಟ್ಟದ್ದಾಗಿ ಚಿತ್ರಿಸಿ ವಿಡಿಯೋ ಒಂದನ್ನು ರೆಡಿ ಮಾಡಿ, ಕೃಷ್ಣಮೂರ್ತಿ ಎಂಬಾತನ ಮೊಬೈಲ್ ನಂಬರಿನಿಂದ ಸುಧೀಂದ್ರ ಆಪ್ತ ನಾಗರಾಜ್ ಮೊಬೈಲಿಗೆ ಕಳುಹಿಸಿದ್ದ. ಇದನ್ನು ಜಾಲತಾಣದಲ್ಲಿ ಹರಿಯಬಿಟ್ಟು ಮಾನ ಕಳೆಯುತ್ತೇವೆ. ಇಲ್ಲದಿದ್ದರೆ ಹಣ ಕೊಟ್ಟುಬಿಡಿ ಎಂದು ದುಂಬಾಲು ಬಿದ್ದಿದ್ದಾರೆ. ಕಳೆದ ಜ.12ರಿಂದ 21ರ ವರೆಗೂ ಸತತವಾಗಿ ಪೀಡಿಸಿದ್ದಾರೆ. ಕೊನೆಗೆ 26 ಲಕ್ಷ ನೀಡುವಂತೆ ಹೇಳಿ ತಮ್ಮ ಡಿಮಾಂಡನ್ನು ಇಳಿಸಿದ್ದಾರೆ. ಈ ಬಗ್ಗೆ ಸುಧೀಂದ್ರ ಪಿಎ ಆಗಿರುವ ನಾಗರಾಜ್ ಕೊಟ್ಟ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಕೃಷ್ಣಮೂರ್ತಿ ಮತ್ತು ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಮಾರ್ಕೆಟ್ ವೇಲುಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Anand Guruji Blackmailed by Media Persons Demands 50 Lakhs. A case has been registered by the registered at the Giri Nagara Police Station
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm