ಬ್ರೇಕಿಂಗ್ ನ್ಯೂಸ್
02-02-21 05:26 pm Headline Karnataka News Network ಕ್ರೈಂ
ಬೆಂಗಳೂರು, ಫೆ.2: ಖ್ಯಾತ ಟಿವಿ ಜ್ಯೋತಿಷಿ ಆನಂದ ಗುರೂಜಿಯನ್ನು ವಿಡಿಯೋ ತುಣುಕು ಮುಂದಿಟ್ಟು ಪತ್ರಕರ್ತರ ಸೋಗಿನಲ್ಲಿ ಬ್ಲ್ಕಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಆನಂದ ಗುರೂಜಿ ಆಪ್ತ ಬಿ.ಆರ್.ನಾಗರಾಜ್ ನೀಡಿದ್ದ ದೂರಿನಂತೆ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತು ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಎಂಬ ಮೂವರ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ ಸೂರ್ಯ ಎನ್ನುವ ಪತ್ರಿಕೆಯ ಸಂಪಾದಕ ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಮತ್ತು ಯುವ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎ.ಸಿ.ವೆಂಕಟೇಶ್ ಎಂಬವರು ಕಾಂಗ್ರೆಸ್ ಮುಖಂಡ ಸುಧೀಂದ್ರ ಹಾಗೂ ಆನಂದ ಗುರೂಜಿ ಕುಟುಂಬದ ವೈಯಕ್ತಿಕ ವಿವರಗಳನ್ನು ಕಲೆಹಾಕಿದ್ದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸುವುದಾಗಿ ಹೇಳಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಸುದ್ದಿಯನ್ನು ಹಾಕದಿರಲು 50 ಲಕ್ಷ ರೂ. ನೀಡುವಂತೆ ಬೆದರಿಸಿದ್ದರು.

ಬೆದರಿಕೆಯ ಬಗ್ಗೆ ಸುಧೀಂದ್ರ ನಿರ್ಲಕ್ಷ್ಯ ಮಾಡಿದ್ದರು. ಆದರೆ, ಇಷ್ಟಕ್ಕೇ ಸುಮ್ಮನಾಗದ ಆರೋಪಿಗಳು ಸುಧೀಂದ್ರ ಮತ್ತು ಆನಂದ ಗುರೂಜಿ ಬಗ್ಗೆ ಕೆಟ್ಟದ್ದಾಗಿ ಚಿತ್ರಿಸಿ ವಿಡಿಯೋ ಒಂದನ್ನು ರೆಡಿ ಮಾಡಿ, ಕೃಷ್ಣಮೂರ್ತಿ ಎಂಬಾತನ ಮೊಬೈಲ್ ನಂಬರಿನಿಂದ ಸುಧೀಂದ್ರ ಆಪ್ತ ನಾಗರಾಜ್ ಮೊಬೈಲಿಗೆ ಕಳುಹಿಸಿದ್ದ. ಇದನ್ನು ಜಾಲತಾಣದಲ್ಲಿ ಹರಿಯಬಿಟ್ಟು ಮಾನ ಕಳೆಯುತ್ತೇವೆ. ಇಲ್ಲದಿದ್ದರೆ ಹಣ ಕೊಟ್ಟುಬಿಡಿ ಎಂದು ದುಂಬಾಲು ಬಿದ್ದಿದ್ದಾರೆ. ಕಳೆದ ಜ.12ರಿಂದ 21ರ ವರೆಗೂ ಸತತವಾಗಿ ಪೀಡಿಸಿದ್ದಾರೆ. ಕೊನೆಗೆ 26 ಲಕ್ಷ ನೀಡುವಂತೆ ಹೇಳಿ ತಮ್ಮ ಡಿಮಾಂಡನ್ನು ಇಳಿಸಿದ್ದಾರೆ. ಈ ಬಗ್ಗೆ ಸುಧೀಂದ್ರ ಪಿಎ ಆಗಿರುವ ನಾಗರಾಜ್ ಕೊಟ್ಟ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಕೃಷ್ಣಮೂರ್ತಿ ಮತ್ತು ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಮಾರ್ಕೆಟ್ ವೇಲುಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Anand Guruji Blackmailed by Media Persons Demands 50 Lakhs. A case has been registered by the registered at the Giri Nagara Police Station
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm