ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm