ಬ್ರೇಕಿಂಗ್ ನ್ಯೂಸ್
07-02-21 09:37 am Headline Karnataka News Network ಕ್ರೈಂ
ಚಿಕ್ಕಮಗಳೂರು, ಫೆಬ್ರವರಿ 7: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ.
ಶೃಂಗೇರಿ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಎಎಸ್ಪಿ ಶೃತಿ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರು ಶೃಂಗೇರಿ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಘಟನೆ ನಡೆದು ಎರಡು ದಿನದ ಬಳಿಕ ದೂರು ದಾಖಲಿಸಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತ ಮೇಲೆ ಅವಳ ಚಿಕ್ಕಮ್ಮನ ಸಹಕಾರದಿಂದ 17 ಜನರು 5 ತಿಂಗಳುಗಳ ಕಾಲ ಅತ್ಯಾಚಾರ ಮಾಡಿದ್ದರು. ಪ್ರಕರಣದ ಕುರಿತು ಈಗಾಗಲೇ 8 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರ ಮೇಲೆ ಒತ್ತಡಗಳು ಬಂದಿದ್ದವು ಎನ್ನಲಾಗಿದೆ. ಆ ಕಾರಣಕ್ಕೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶೃಂಗೇರಿಯ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತುಗೊಳಿಸಿದ್ದಾರೆ.

ಪಿಎಸ್ಐ ಕೀರ್ತಿ ಕುಮಾರ್ ಎತ್ತಂಗಡಿ:
ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಶೃಂಗೇರಿಯಿಂದ ಉತ್ತರ ಕನ್ನಡದ ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಸದ್ಯ ಪ್ರಕರಣದ ತನಿಖೆಯನ್ನು ಎಎಸ್ಪಿ ಶೃತಿ ವಹಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ, 8 ಆರೋಪಿಗಳ ಬಂಧನವಾಗಿದೆ.
ಉಳಿದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ವರ್ಗಾವಣೆ ಮಾಡಲಾಗಿದೆ. ಹೊಸ ತಂಡದ ಜೊತೆ ಎಎಸ್ಪಿ ಶೃತಿ ತನಿಖೆಯನ್ನು ಮುಂದುವರೆಸಿದ್ದಾರೆ.
Read: ಶೃಂಗೇರಿಯಲ್ಲಿ ಪೈಶಾಚಿಕ ಕೃತ್ಯ ; 15ರ ಬಾಲಕಿಗೆ 17ಕ್ಕೂ ಹೆಚ್ಚು ಮಂದಿ ಗ್ಯಾಂಗ್ ರೇಪ್, ಬ್ಲಾಕ್ ಮೇಲ್ !
Rape of a 15-year-old girl in Sringeri Police Inspector Siddaramaiah suspended and station PSI has been transferred. Six people have been arrested for the rape, sexual abuse and trafficking of a 15-year-old girl in Karnakta’s Chikkamagaluru district.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm