ಬ್ರೇಕಿಂಗ್ ನ್ಯೂಸ್
07-02-21 12:43 pm Headline Karnataka News Network ಕ್ರೈಂ
ಅಶ್ಲೀಲ ವಿಡಿಯೋ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ಆರೋಪದ ಮೇಲೆ ಖ್ಯಾತ ನಟಿ ಮತ್ತು ರೂಪದರ್ಶಿ ಗೆಹನಾ ವಸಿಷ್ಠ ಅವರನ್ನು ಮುಂಬೈ ಕ್ರೈಂ ಬ್ರಾಂಚ್ ಪೋಲೀಸರು ಬಂಧಿಸಿದ್ದಾರೆ.
ಆಕೆಯ ಜೊತೆ ಇನ್ನು ಅನೇಕ ರೂಪದರ್ಶಿಯರು ಸೇರಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಗೆಹನಾ ವಿಚಾರಣೆ ನಡೆಸಿದ ಪೊಲೀಸರು, ಇದುವರೆಗೂ ಸುಮಾರು 87ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ, ತನ್ನ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿದೆ. ಅಲ್ಲದೆ ಆಕೆಯ ವೆಬ್ ಸೈಟ್ ಗೆ ಚಂದಾದಾರಲಾಗಲು 2000 ರೂ. ಪಾವತಿಸಬೇಕು ಎನ್ನುವ ಮಾಹಿತಿಯನ್ನು ಮುಂಬೈ ಪೊಲೀಸರು ಬಹಿರಂಗ ಪಡಿಸಿದ್ದಾರೆ.
ಬಂಧಿತರಲ್ಲಿ ವಯಸ್ಕ ಸಿನಿಮಾ ನಿರ್ದೇಶನ ಮಾಡುತ್ತಿದ್ದ ನಿರ್ದೇಶಕ, ನಿರ್ಮಾಪಕ ಮತ್ತು ಗ್ರಾಫಿಕ್ಸ್ ಡಿಸೈನರ್, ಕ್ಯಾಮರಾ ಮ್ಯಾನ್ ಸೇರಿದಂತೆ ಇಡೀ ತಂಡವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಅವರ ಬ್ಯಾಂಕ್ ಖಾತೆಯನ್ನು ಸೀಸ್ ಮಾಡಿದ್ದಾರೆ.

ಗೆಹನಾ ಮತ್ತು ಆಕೆಯ ಗ್ಯಾಂಗ್ ಅಶ್ಲೀಲ ದೃಶ್ಯಗಳಲ್ಲಿ ನಟಿಸುವಂತೆ ಒತ್ತಾಯ ಮಾಡುತ್ತಿದ್ದರು ಎಂದು ಬಂಧಿತರಲ್ಲಿ ಮೂವರು ದೂರು ನೀಡಿದ್ದಾರೆ. ರಕ್ಷಿಸಿದ ಸಂತ್ರಸ್ತೆಯರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಗೆಹನಾ ಮಿಸ್ ಏಷ್ಯಾ ಬಿಕಿನಿ ಕಿರಿಟವನ್ನು ಗೆದ್ದುಕೊಂಡಿದ್ದಾರೆ. ಅನೇಕ ಜಾಹೀರಾತು ಗಳಲ್ಲಿಯೂ ಮಿಂಚಿದ್ದಾರೆ. ಹಿಂದಿ ಮತ್ತು ತೆಲುಗು ಸಿನಿಮಾರಂಗದಲ್ಲೂ ಗೆಹನಾ ಗುರುತಿಸಿಕೊಂಡಿದ್ದಾರೆ. ವಯಸ್ಕ ವೆಬ್ ಸೀರಿಸ್ ನಲ್ಲೂ ಗೆಹನಾ ನಟಿಸಿದ್ದಾರೆ. ತನ್ನದೇ ಆದ ಮೊಬೈಲ್ ಅಪ್ಲಿಕೇಶನ್ ಹೊಂದಿರುವ ಗೆಹನಾ ಆಗಾಗ ಅಶ್ಲೀಲ ವಿಡಿಯೋಗಳನ್ನು ಹರಿಬಿಡುತ್ತಿರುತ್ತಾರೆ.
The Mumbai Police Crime Branch on Saturday arrested web series actor Gehana Vasisth in connection an FIR registered earlier this week in connection with forcing women to expose for porn movies. With the arrest of Vasisth, a total of six persons have been arrested in the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am