ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm