ಬ್ರೇಕಿಂಗ್ ನ್ಯೂಸ್
08-02-21 11:22 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಫೆ.8: ಕೋತಿಗಳ ಕಾಟ ತಾಳಲಾರದೆ 30ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಉಣಿಸಿ ಸಾಗಿಸುತ್ತಿದ್ದರೆನ್ನಲಾದ ಟ್ರ್ಯಾಕ್ಟರ್ನನ್ನು ಹಿಂದು ಜಾಗರಣ ವೇದಿಕೆ ಮುಖಂಡರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.
ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ತಾಳಲಾರದೆ, ಕಳೆದ ದಿನ ಬೆಳಗ್ಗೆ ಐವತ್ತು ಕ್ಕೂ ಹೆಚ್ಚು ಕೋತಿಗಳನ್ನ ಹಿಡಿದು ಒಂದೇ ಬೋನಿನಲ್ಲಿ ಬಂಧಿಸಿಡಲಾಗಿದ್ದು, ರಾತ್ರಿ 9ರ ನಂತರ ಬೋನಿನಲ್ಲಿ ಇದ್ದ ಕೋತಿಗಳು ಅಸ್ವಸ್ಥಗೊಂಡು ಕೆಲವು ಮೂರ್ಛೆ ಹೋಗಿದ್ದು ಹಾಗೂ 30 ಕ್ಕೂ ಹೆಚ್ಚು ಕೋತಿಗಳು ಉಸಿರುಗಟ್ಟಿ ಸತ್ತು ಹೋಗಿವೆ.
ತದ ನಂತರ ರಾತ್ರಿ ಸುಮಾರು 9 ಗಂಟೆಯಲ್ಲಿ ಜರಬಂಡಹಳ್ಳಿ ತಾಲೂಕು ಪಂಚಾಯತ್ ಸದಸ್ಯರಾದ ಮೋಹನ್ ಅವರ ಟ್ರ್ಯಾಕ್ಟರ್ ನಲ್ಲಿ ಗೌರಿಬಿದನೂರು ಪಟ್ಟಣದ ಕಲ್ಲೂಡಿ ರೈಲ್ವೆ ಹಳಿಯ ಬಳಿ ಬಿಡಲು ಬಂದ ವೇಳೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಟ್ರ್ಯಾಕ್ಟರ್ ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಕೋತಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ಟ್ರ್ಯಾಕ್ಟರ್ ಹಾಗೂ ಚಾಲಕರನ್ನು ಗೌರಿಬಿದನೂರು ಪುರ ಪೊಲೀಸರಿಗೆ ಒಪ್ಪಿಸಿ ಅರಣ್ಯ ಇಲಾಖೆಯವರು ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ದೂರು ನೀಡಿದ್ದಾರೆ.
ವಿಷ ಹಾಕಿ ಕೊಂದ ಆರೋಪ :
ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ಬೇಸತ್ತ ಜನ ಬೋನಿನಲ್ಲಿ ಕೋತಿಗಳನ್ನು ಸೆರೆಹಿಡಿದು, ಅವುಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ದು, ಪ್ರಕರಣವನ್ನು ಮುಚ್ಚಲು ರೈಲ್ವೆ ಹಳಿಯ ಬಳಿ ಬಿಸಾಡಲು ಯತ್ನಿಸಿರುವ ಬಗ್ಗೆ ಮಾಹಿತಿ ಹಿಂದು ಜಾಗರಣ ವೇದಿಕೆಯ ಮುಖಂಡರಿಗೆ ಲಭ್ಯವಾಗುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿ ಟ್ರ್ಯಾಕ್ಟರ್ನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜರಬಂಡಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಕೋತಿಗಳಿಗೆ ವಿಷ ಹಾಕಿರುವುದಾಗಿ ಹಿಂದು ಜಾಗರಣ ವೇದಿಕೆ ಮುಖಂಡರು ಆರೋಪಿಸಿದ್ದಾರೆ.
Over 30monkeys were suspected to be poisoned to death in Chikkaballapur, Bengaluru.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm