ಬ್ರೇಕಿಂಗ್ ನ್ಯೂಸ್
10-02-21 05:54 pm Mangalore Correspondent ಕ್ರೈಂ
ಉಳ್ಳಾಲ, ಫೆ.10 : ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆಗಿರುವ ಬಗ್ಗೆ ಆರೋಪ ಕೇಳಿಬಂದಿದ್ದು ಉಳ್ಳಾಲ ಠಾಣೆಯಲ್ಲಿ 18 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಪಿಟಿ ವಿಭಾಗದ ಪ್ರಥಮ ವರ್ಷದ ಐದು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ 18 ಮಂದಿ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಕೊಲೆ ಬೆದರಿಕೆ ಒಡ್ಡಿದ್ದಾಗಿ ಪ್ರಕರಣ ದಾಖಲಾಗಿದೆ. ಫೆ.4 ರಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಫೆ.8ರಂದು ಠಾಣೆಗೆ ದೂರು ನೀಡಿದೆ.

ಬಿಪಿಟಿ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಮೂಲದ ಅಮಲ್ ಮಹಮ್ಮದ್, ಆಸಿಮ್ ಜಾಸಿಮ್ ಕೆ.ಎಂ., ಮಹಮ್ಮದ್ ಜೀಹಾವ್, ಆಕಿಬ್ ಜಿಹಾದ್ , ಅಹಮ್ಮದ್ ಶಿಬಿಲಿ, ಶಿನಾಸ್ ಮೊಯಿದುನ್ನಿ ಎಂಬ ಐವರನ್ನು ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಶೋಷಣೆ ಮಾಡಿದ್ದಾರೆ. ತಮ್ಮ ತರಗತಿ ಕೋಣೆಗೆ ಒತ್ತಾಯಪೂರ್ವಕ ಕರೆಸಿಕೊಂಡು ಕಿರಿಯ ವಿದ್ಯಾರ್ಥಿಗಳು ತಮ್ಮೆದುರು ತಲೆ ತಗ್ಗಿಸಿ ನಿಲ್ಲಬೇಕು, ಮೀಸೆ ಬೋಳಿಸಬೇಕು ಎಂದು ಧಮ್ಕಿ ಹಾಕಿದ್ದಾರೆ. ಐದು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ತಳ್ಳಾಟ ನಡೆಸಿದ್ದು ಈ ಬಗ್ಗೆ ಕಾಲೇಜಿನವರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದರಿಂದ ನೊಂದ ಕಿರಿಯ ಐವರು ವಿದ್ಯಾರ್ಥಿಗಳು ಬಿಪಿಟಿ ಕ್ಯಾಂಪಸ್ ಮುಖ್ಯಸ್ಥರಾದ ಮಾರ್ಟಿನ್ ಜಾರ್ಜ್ ಅವರಿಗೆ ದೂರನ್ನು ನೀಡಿದ್ದರು.


ಉಪನ್ಯಾಸಕ ಮಾರ್ಟಿನ್ ಜಾರ್ಜ್ ಕಾಲೇಜಿನ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ, 18 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆರೋಪಿತರನ್ನು ಮಹಮ್ಮದ್ ಶಮ್ಮಾಸ್, ಅಕ್ಷಯ್ ಕೆ.ಎಸ್, ರಾಬಿನ್ ಬಿಜು, ಅಬ್ದುಲ್ ಇನಾಸ್ ಮಹಮ್ಮದ್, ಜಿಪ್ರಿನ್ ರೊಚಾ, ಆಲ್ವಿನ್ ಜಾಯ್ , ಸಾಧನ್ ನವಿಲ್, ಮಹಮ್ಮದ್ ಸೂರಜ್ , ಅಮೀನ್ ಶಮ್ಮಾಸ್ , ಅಬ್ದುಲ್ ವಕೀಬ್ , ಶಾಹೀನ್ ಅಬ್ದುಲ್ಲಾ , ಜೆರೊನ್ ಶೆರಿಲ್, ಬಾಸಿಲ್ ಸಿ.ಪಿ, ಅಶ್ವಿನ್ ಬಾಬು, ಜೌಹಾರ್ ಮೊಯ್ದಿನ್ , ಜಾಬಿನ್ ಮೆಹರೂಫ್, ಅಹಮ್ಮದ್ ಫಯಾಝ್ , ಅಬ್ದುಲ್ ಬಾಸಿತ್ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು ಪ್ರಕರಣ ಹೊರಬರದಂತೆ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ.
18 students booked for ragging 5 First-year students of bachelor of physiotherapy at kanachur college in Ullal, Mangalore.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm