ಬ್ರೇಕಿಂಗ್ ನ್ಯೂಸ್
10-02-21 07:16 pm Mangaluru Correspondent ಕ್ರೈಂ
ಮಂಗಳೂರು, ಫೆ.10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ತಲವಾರು ದಾಳಿ ನಡೆಸಿದೆ.
ಕಾಟಿಪಳ್ಳ ನಿವಾಸಿಯಾಗಿರುವ ಪಿಂಕಿ ನವಾಜ್ ರೌಡಿ ಶೀಟರ್ ಆಗಿದ್ದು ರಸ್ತೆ ಬದಿ ನಿಂತಿದ್ದಾಗಲೇ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಮಂದಿಯಿದ್ದ ತಂಡ ತಲವಾರು ಬೀಸಿದೆ. ಆದರೆ, ನವಾಜ್ ಓಡಿ ತಪ್ಪಿಸಿಕೊಂಡಿದ್ದು ಬೆನ್ನು ಮತ್ತು ಕೈಗೆ ತೀವ್ರ ಗಾಯಗೊಂಡಿದ್ದಾನೆ. ಬಳಿಕ ಆತನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.



ದಾಳಿ ಮಾಡಿದವನನ್ನು ಶಾಕಿಬ್ ಯಾನೆ ಶಬ್ಬು ಎಂದು ಗುರುತಿಸಲಾಗಿದ್ದು ಸರಗಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಶಾಕಿಬ್ ಕೂಡ ಕಾಟಿಪಳ್ಳದ ನಿವಾಸಿಯೇ ಆಗಿದ್ದು ಯಾಕಾಗಿ ತಲವಾರು ದಾಳಿ ನಡೆಸಿದ್ದಾನೆ ಎನ್ನೋದು ಗೊತ್ತಾಗಿಲ್ಲ.
ನಾಲ್ಕು ವರ್ಷಗಳ ಹಿಂದೆ ಹಾಡುಹಗಲೇ ಕಾಟಿಪಳ್ಳ ಪೇಟೆಯ ಬಳಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ನಡೆದಿತ್ತು. ಅದರಲ್ಲಿ ಪಿಂಕಿ ನವಾಜ್ ಸೇರಿ ನಾಲ್ವರು ಆರೋಪಿಗಳಿದ್ದರು. ಕೊಲೆಯ ಬಳಿಕ ಅಲ್ಲಿಂದ ಪರಾರಿಯಾಗಿದ್ದು ಪೊಲೀಸರು ವಿಷಯ ತಿಳಿದು ಫಾಲೋ ಮಾಡಿದ್ದರು. ಕಿನ್ನಿಗೋಳಿಯಿಂದ ಮೂಡುಬಿದ್ರೆ ಕಡೆಗೆ ಕಾರಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿದ್ದರು. ಆರೋಪಿಗಳು ತಲವಾರು ಬೀಸಿದ್ದರಿಂದ ಪೊಲೀಸರು ಅವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಈ ಪೈಕಿ ಪಿಂಕಿ ನವಾಜ್ ಕಾಲಿಗೂ ಗುಂಡು ಬಿದ್ದಿತ್ತು.
ಇಂದು ಸಂಜೆ ನವಾಜ್ ನನ್ನು ಗುರಿಯಾಗಿರಿಸಿ ದಾಳಿ ನಡೆದಿದೆ. ಪ್ರಾಥಮಿಕ ಮಾಹಿತಿಯಲ್ಲಿ ಶಾಕಿಬ್ ಮತ್ತು ತಂಡ ಈ ಕೃತ್ಯ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಡುವೆ, ಯಾವ ರೀತಿಯ ದ್ವೇಷ ಇತ್ತು ಎನ್ನೋದು ಗೊತ್ತಾಗಿಲ್ಲ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
Deepak Roa Murder accused Pinky Nawaz has been attacked by some miscreants with sword at Surathkal in Mangalore. The Surathkal police are investigating the case. Pinky Nawaz was one among the four accused of Deepak Rao Murder.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am