ಬ್ರೇಕಿಂಗ್ ನ್ಯೂಸ್
11-02-21 03:18 pm Mangalore Correspondent ಕ್ರೈಂ
ಮಂಗಳೂರು, ಫೆ.11; ತುಳು ಚಿತ್ರ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಕನ್ನಡದ ಚಿತ್ರರಂಗದ ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಕೋರ್ಟಿನಲ್ಲಿ ವಂಚನೆ ಕೇಸು ದಾಖಲಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಪದ್ಮಜಾ ರಾವ್, ಚಾಲಿಪೋಲಿಲು ಚಿತ್ರದಲ್ಲಿ ನಟಿಸುತ್ತಿದ್ದಾಗ ಅದರ ನಿರ್ದೇಶನ ಮಾಡುತ್ತಿದ್ದ ವೀರೇಂದ್ರ ಶೆಟ್ಟಿ ಬಳಿಯಿಂದ ಹಣ ಪಡೆದಿದ್ದರು. ವೈಯಕ್ತಿಕವಾಗಿ ಒಂದು ಲಕ್ಷ , ಎರಡು ಲಕ್ಷವೆಂದು ಹಣ ಸಾಲ ಪಡೆದಿದ್ದು, ಹಿಂತಿರುಗಿ ಕೊಟ್ಟಿರಲಿಲ್ಲ. 2018ರಿಂದ 19ರ ನಡುವೆ ಸುಮಾರು 41 ಲಕ್ಷ ರೂಪಾಯಿ ಹಣವನ್ನು ಸಾಲ ಪಡೆದಿದ್ದು, ಹಿಂತಿರುಗಿಸದೆ ವಂಚಿಸಿದ್ದಾರೆಂದು ವೀರೇಂದ್ರ ಶೆಟ್ಟಿ ಮಂಗಳೂರಿನ ಕೋರ್ಟಿನಲ್ಲಿ ದೂರು ದಾಖಲಿಸಿದ್ದಾರೆ.

ಒಂದು ಲಕ್ಷ ರೂ. ಮಾತ್ರ ನಗದು ರೂಪದಲ್ಲಿ ಕೊಟ್ಟಿದ್ದು, ಉಳಿದೆಲ್ಲವನ್ನೂ ಚೆಕ್ ರೂಪದಲ್ಲಿ ನೀಡಿದ್ದೆ. ಅಲ್ಲದೆ, ತನ್ನ ಪ್ರೊಡಕ್ಷನ್ ಹೌಸ್ ವೀರು ಟಾಕೀಸ್ ಹೆಸರಲ್ಲೇ ಹಣವನ್ನು ಸಾಲ ನೀಡಿದ್ದೆ. ಹಾಗಾಗಿ ಹಣ ನೀಡಿದ್ದಕ್ಕೆ ದಾಖಲೆ ಇದೆ. ಬದಲಿಗೆ, ಪದ್ಮಜಾ ರಾವ್ ಖಾಲಿ ಚೆಕ್ ನೀಡಿದ್ದರು. ಕಳೆದ 2020ರ ಸೆಪ್ಟಂಬರ್ ತಿಂಗಳಲ್ಲಿ ಚೆಕ್ ಬೌನ್ಸ್ ಕೇಸು ಮಾಡಿದ್ದು ನೋಟೀಸ್ ಹೋಗಿತ್ತು. ನೋಟಿಸಿಗೆ ಉತ್ತರ ನೀಡದ ಕಾರಣ ಮತ್ತೆ ನವೆಂಬರ್ ನಲ್ಲಿ ವಿಚಾರಣೆಗೆ ಬಂದಿತ್ತು. ಆಗಲೂ ನಟಿ ಕ್ಯಾರ್ ಮಾಡದೆ, ನೋಟೀಸಿಗೆ ಉತ್ತರವನ್ನೂ ನೀಡಿರಲಿಲ್ಲ. ಇದೀಗ ಮಂಗಳೂರಿನ ಜೆಎಂಎಫ್ 5ನೇ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು, ಬೆಂಗಳೂರಿನ ಕಲಘಟ್ಟ ಪೊಲೀಸರಿಗೆ ಬಂಧಿಸಿ ಕರೆತರುವಂತೆ ಸೂಚನೆ ನೀಡಿದ್ದಾಗಿ ವೀರೇಂದ್ರ ಶೆಟ್ಟಿ ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಪದ್ಮಜಾ ರಾವ್, ಕನ್ನಡದ ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿದ್ದು ಮುಂಗಾರು ಮಳೆ ಚಿತ್ರದ ಬಳಿಕ ಖ್ಯಾತಿ ಗಳಿಸಿದ್ದರು. ಇತ್ತೀಚೆಗೆ ತುಳು ಚಿತ್ರಗಳಲ್ಲಿಯೂ ಪದ್ಮಜಾ ಕಾಣಿಸಿಕೊಂಡಿದ್ದರು. ಕೋರ್ಟಿನಲ್ಲಿ ಮುಂದಿನ ವಿಚಾರಣೆ ಮಾರ್ಚ್ 9ಕ್ಕೆ ಇದ್ದು, ಪದ್ಮಜಾರನ್ನು ಪೊಲೀಸರು ಬಂಧಿಸಿ ಹಾಜರು ಮಾಡಬೇಕಿದೆ.
The JMF Mangalore court has issued a Non-Bailable warrant against Kannada Actress Padmaja Rao over cheque Bounce Case. She had borrowed loan from Tulu Director Veerendra Shetty Kavoor.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm